ಎಫ್ಡಿಎ ಪ್ರಶ್ನೆಪತ್ರಿಕೆ ಸೋರಿಕೆ: KPSCಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ದ್ವಿತೀಯ ದರ್ಜೆ ಸಹಾಯಕ ಸಿಸಿಬಿ ವಶಕ್ಕೆ
ಬೆಂಗಳೂರ್/ಬಾಗಲಕೋಟೆ:
ಪ್ರಶ್ನೆಪತ್ರಿಕೆ ಸೋರಿಕೆ ಕೇಸ್ನಲ್ಲಿ ಮತ್ತೊಬ್ಬ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ರಮೇಶ್ ಹೆರಕಲ್ ಎಂದು ಗುರುತಿಸಲಾಗಿದೆ.
ರಮೇಶ ಮೂಲತಃ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬೂದಿಹಾಳ ಗ್ರಾಮದ ವನ್ನು ಪ್ರಶ್ನೆಪತ್ರಿಕೆ ಸೋರಿಕೆ ವಿಷಯ ಬಹಿರಂಗವಾದ ಬೆನ್ನಲ್ಲೇ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಗ್ರಾಮಕ್ಕೆ ತೆರಳಿದ್ದನು.
ಹೀಗಾಗಿ, ಆರೋಪಿಯ ಬೆನ್ನತ್ತಿದ್ದ ಸಿಸಿಬಿ ತಂಡ ರಮೇಶ್ನನ್ನು ಚಿಕ್ಕಪಡಸಲಗಿಯಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
