ಬೆಂಗಳೂರು:
ಮಲ್ಲೇಶ್ವರ ಕ್ಷೇತ್ರದ ಶಾಸಕರೂ ಆಗಿರುವ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಶುಕ್ರವಾರ ಬೆಳಗ್ಗೆ ಕ್ಷೇತ್ರದ ವಿವಿಧೆಡೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು.
ಅಧಿಕಾರಿಗಳ ಜತೆ ಗಾಯತ್ರಿ ನಗರ ವಾರ್ಡ್ಗೆ ಭೇಟಿ ಕೊಟ್ಟ ಅವರು, ಆ ವಾರ್ಡ್ನ ಆರನೇ ಮುಖ್ಯರಸ್ತೆಯಲ್ಲಿ ನಡೆಯುತ್ತಿರುವ ಪೈಪ್ಲೈನ್ ಕಾಮಗಾರಿ ವೀಕ್ಷಣೆ ಮಾಡಿದರು. ಕಾಮಗಾರಿಯನ್ನು ತ್ವರಿತವಾಗಿ ಮುಗಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ತಾಕೀತು ಮಾಡಿದರಲ್ಲದೆ, ಆ ಪ್ರದೇಶದಲ್ಲಿ ನೀರಿನ ಸಮಸ್ಯೆಯ ಬಗ್ಗೆ ಮಾಹಿತಿ ಪಡೆದುಕೊಂಡರು.
65ನೇ ವಾರ್ಡ್ ನಲ್ಲಿ ಇರುವ ಚಂದ್ರಶೇಖರ್ ಆಜಾದ್ ಮೈದಾನ ಹಾಗೂ ಕೆಂಪೇಗೌಡ ಆಟದ ಮೈದಾನದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿದರು.
![ಮಲ್ಲೇಶ್ವರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಮಾಜಿ ಡಿಸಿಎಂ 1 Former DyCM inspects development work in Malleswaram](https://kannada.thebengalurulive.com/wp-content/uploads/2021/07/Former-DyCM-inspects-development-work-in-Malleswaram.jpg)
ಸುಬ್ರಹ್ಮಣ್ಯ ನಗರದ ಸರ್ಕಾರಿ ಆಂಗ್ಲ ಶಾಲೆಯ ಕಾಮಗಾರಿ ನಡೆಯುತ್ತಿದ್ದು ಅದನ್ನು ವೀಕ್ಷಿಸಿದರು.
ಮಲ್ಲೇಶ್ವರ 8ನೇ ಮುಖ್ಯರಸ್ತೆ ಹಾಗೂ 8 ನೇ ಅಡ್ಡ ರಸ್ತೆಯಲ್ಲಿ ನಡೆಯುತ್ತಿರುವ ವೈಟ್ ಟಾಪಿಂಗ್ ಮತ್ತು ಸ್ಯಾನಿಟರಿ ಲೈನ್ ಸ್ಥಳಾಂತರ ಸಂಬಂಧ ನಡೆಯುತ್ತಿರುವ ಕಾಮಗಾರಿಗಳನ್ನೂ ವೀಕ್ಷಿಸಿದರು.
ಸ್ಥಳೀಯ ಜನರಿಂದಲೂ ಡಾ.ಅಶ್ವತ್ಥನಾರಾಯಣ ಮಾಹಿತಿ ಪಡೆದುಕೊಂಡರಲ್ಲದೆ, ಮುಂದಿನ ಶೀಘ್ರವೇ ಕಾಮಗಾರಿ ಮುಗಿಸಿ ಎಂದು ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಸಂಕ್ಷಿಪ್ತ ವರದಿ- 30/07/2021
— Dr. Ashwathnarayan C. N. (@drashwathcn) July 30, 2021
Brief round-up of today's activities-
Inspected several ongoing works at Malleshwara constituency. New playground, parks, recharge pits, & pipeline works are progressing. Officials have been instructed to complete the projects soon.#ModelMalleshwaram pic.twitter.com/z0OcsEVB5P
ಬಳಿಕ ಮಾತನಾಡಿದ ಅವರು, ಮಲ್ಲೇಶ್ವರ ಕ್ಷೇತ್ರದಲ್ಲಿ ಹಳೆಯದಾಗಿದ್ದ ಕಾವೇರಿ ಪೈಪ್ಲೈನ್ ಬದಲಾವಣೆ ಮಾಡುವ ಕೆಲಸ ಭರದಿಂದ ನಡೆಯುತ್ತಿದೆ. ನೀರಿನ ಸೋರಿಕೆ ಹಾಗೂ ಸ್ವಚ್ಛ ನೀರು ಪೂರೈಕೆ ನಿಟ್ಟಿನಲ್ಲಿ ಈ ಯೋಜನೆ ರೂಪಿಸಲಾಗಿದೆ. ಗಾಯತ್ರಿನಗರ ವಾರ್ಡ್ನಲ್ಲಿಯೂ ಯೋಜನೆ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ ಪಾಪರೆಡ್ಡಿ, ಮಲ್ಲೇಶ್ವರ ಬಿಇಒ ಉಮಾದೇವಿ ಸೇರಿದಂತೆ ಇತರರು ಇದ್ದರು.