Home ಅಪರಾಧ ಅವೈಜ್ಞಾನಿಕ ಹಂಪ್ಸ್ ರಿಂದ ಸಂಭವಿಸಿದ ಅಪಘಾತದಲ್ಲೇ ನಾಲ್ವರ ದುರ್ಮರಣ

ಅವೈಜ್ಞಾನಿಕ ಹಂಪ್ಸ್ ರಿಂದ ಸಂಭವಿಸಿದ ಅಪಘಾತದಲ್ಲೇ ನಾಲ್ವರ ದುರ್ಮರಣ

109
0

ಹಾಸನ:

ರಾಷ್ಟ್ರೀಯ ಹೆದ್ದಾರಿ, ಹಾಸನ ನಗರದ ಹೊರವಲಯದಲ್ಲಿ ಅವೈಜ್ಞಾನಿಕ ಹಂಪ್ಸ್ ಹಾಕಿದ್ದರಿಂದ ಟಾಟಾಸುಮೋಗೆ ಕ್ವಾಲಿಸ್ ಕಾರ್​ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪಿದ ಘಟನೆ ಹಾಸನದಲ್ಲಿ ನಡೆದಿದೆ. ಬೆಂಗಳೂರಿನಿಂದ ಸುಮಾರು 200 ಕಿ.ಮೀ ದೂರದಲ್ಲಿ ಈ ಅಪಘಾತ ಸಂಭವಿಸಿದೆ

ಮೃತರನ್ನು ಕೆ.ಜಿ.ಎಫ್ ಮೂಲದ ಪ್ರದೀಪ್ ಕುಮಾರ್, ಚಂದ್ರಶೇಖರ್, ನವೀನ್ ಕುಮಾರ್ ಮತ್ತು ಸುನಿಲ್ ಕುಮಾರ್ ಎಂದು ಗುರುತಿಸಲಾಗಿದೆ. ಎಲ್ಲರೂ ಕ್ವಾಲಿಸ್‌ನಲ್ಲಿ ಪ್ರಯಾಣಿಸುತ್ತಿದ್ದಾರೆಂದು ಹೇಳಲಾಗುತ್ತದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಕಿದ ಹಂಪ್‌ಗಳ ಮೇಲೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತದೆ. ಮಾರ್ಗ ಮಧ್ಯೆ ಹಂಪ್ಸ್ ಇದ್ದ ಕಾರಣ ಟಾಟಾ ಸುಮೋ‌‌ ಸ್ಲೋ ಮಾಡಿದಾಗ ಹಿಂಬದಿಯಿಂದ ಕ್ವಾಲಿಸ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

hassan accident2

ಘಟನೆಯಲ್ಲಿ ನಾಲ್ವರು ಮಹಿಳೆಯರು, ಮೂವರು ಮಕ್ಕಳು ಸೇರಿ 13 ಮಂದಿಗೆ ತೀವ್ರ ಗಾಯವಾಗಿದೆ. ಹಾಸನ ಹೊರವಲಯದ ಕೆಂಚಟ್ಟಹಳ್ಳಿ ಬಳಿ ಈ ಅಪಘಾತ ನಡೆದಿದೆ. ಕ್ವಾಲಿಸ್ ವಾಹನದಲ್ಲಿ ಎಂಟು ಮಂದಿ ಕೆಜಿಎಫ್‌ನಿಂದ‌ ಉಡುಪಿಗೆ ಮದುವೆಗೆ ತೆರಳುತ್ತಿದ್ದರು. ಟಾಟಾ ಸುಮೋದಲ್ಲಿ ಹತ್ತು ಮಂದಿ ಧರ್ಮಸ್ಥಳಕ್ಕೆ ತೆರಳುತ್ತಿದ್ದರು.

ಘಟನಾ ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here