ಜಮಖಂಡಿ ;- ಭ್ರಷ್ಟಾಚಾರ, ಸ್ವಜನ ಪಕ್ಷಪಾತದಲ್ಲಿ ತೊಡಗಿದ ಸರ್ಕಾರ ಇದಾಗಿದೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಟೀಕಿಸಿದರು.
ಈ ಸಂಬಂಧ ಮಾತನಾಡಿದ ಅವರು,ಕಳೆದ 5 ತಿಂಗಳಿಂದ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಸರ್ಕಾರ, ಜನಪರ ಕಾಳಜಿ ಇಲ್ಲದ, ನಿಷ್ಕ್ರಿಯ ಸರ್ಕಾರವಾಗಿದೆ. ಭ್ರಷ್ಟಾಚಾರ, ಸ್ವಜನ ಪಕ್ಷಪಾತದಲ್ಲಿ ತೊಡಗಿದ ಸರ್ಕಾರ ಇದಾಗಿದೆ.
ರಾಜ್ಯದಲ್ಲಿ ಮಳೆ, ಬೆಳೆ ಇಲ್ಲದೇ ರೈತರು ಕಂಗಾಲಾಗಿದ್ದಾರೆ. ಕೃಷಿ ಕಾರ್ಮಿಕರಿಗೆ ಉದ್ಯೋಗ ಇಲ್ಲ. ಕುಡಿಯುವ ನೀರಿನ ಸಮಸ್ಯೆ ಇದೆ. ಸರಿಯಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ, ನಿರಂತರ ಲೋಡ್ ಶೆಡ್ಡಿಂಗ್ ಆಗುತ್ತಿದೆ. ರೈತರು ಹೆಸ್ಕಾಂ ಕಚೇರಿಗಳಿಗೆ ಮುತ್ತಿಗೆ ಹಾಕುತ್ತಿರುವುದು ಸಾಮಾನ್ಯವಾಗಿದೆ ಎಂದು ಸರ್ಕಾರದ ವ್ಯಫಲ್ಯಗಳ ಪಟ್ಟಿ ಮಾಡಿದರು.
ಈ ವರ್ಷ ಮಳೆ ಸರಿಯಾಗಿ ಆಗುವುದಿಲ್ಲ ಎಂದು ಹವಾಮಾನ ಇಲಾಖೆ ಸಾಕಷ್ಟು ಮುಂಚೆಯೇ ವರದಿ ನೀಡಿತ್ತು. ಈ ವರದಿಯಿಂದ, ಎಚ್ಚೆತ್ತುಕೊಂಡು ಸರ್ಕಾರ ಕಲ್ಲಿದ್ದಲು ಖರೀದಿಸಿ ಇಡಬೇಕಿತ್ತು. ನಮ್ಮ ನಾಲ್ಕು ಥರ್ಮಲ್ ಪವರ್ ಪ್ರೊಜೆಕ್ಟ್ನಿಂದ 5 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಬಹುದಿತ್ತು. ಆದರೆ, ಪ್ರಸ್ತುತ ಕಲ್ಲಿದ್ದಲು ಇಲ್ಲದ್ದಕ್ಕೆ ಎಲ್ಲವೂ ಬಂದ್ ಆಗಿವೆ. ಇನ್ಸ್ಟಾಲ್ಡ್ ಕೆಪಾಸಿಟಿ 32 ಸಾವಿರ ಮೆಗಾ ವ್ಯಾಟ್ ಇದೆ. ನಮಗೆ ಕೇವಲ 16 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಅವಶ್ಯಕತೆ ಇದೆ. ಆದರೆ, ಈಗ 6 ಸಾವಿರ ಮೆಗಾವ್ಯಾಟ್ ವಿದ್ಯುತ್ ಸಹ ಸಿಗುತ್ತಿಲ್ಲ. ಸಕ್ಕರೆ ಕಾರ್ಖಾನೆಗಳು ಕೂಡ ಬಂದ್ ಆಗಿರುವುದರಿಂದ ಕೋಜೆನ್ ವಿದ್ಯುತ್ ಕೂಡ ಲಭಿಸುತ್ತಿಲ್ಲ. ಹಳ್ಳಿಗಳಲ್ಲಿ ರೈತರ ನೀರಾವರಿಗೆ ಹಾಗೂ ನಿರಂತರ ಜ್ಯೋತಿ ಯೋಜನೆಯಡಿ ವಿದ್ಯುತ್ ಸಿಗುತ್ತಿಲ್ಲ. ಪಟ್ಟಣದಲ್ಲೂ ಲೋಡ್ ಶೆಡ್ಡಿಂಗ್ ಹಾವಳಿ ಹೆಚ್ಚಾಗಿದೆ ಎಂದರು.
The post Govinda Karjola;ಭ್ರಷ್ಟಾಚಾರದಲ್ಲಿ ತೊಡಗಿದ ಸರ್ಕಾರ ಕಾಂಗ್ರೆಸ್ – ಗೋವಿಂದ ಕಾರಜೋಳ appeared first on Ain Live News.