
Gruha Jyothi : Warning of strict action if demand for money for scheme registration
ಬೆಂಗಳೂರು:
ಗೃಹ ಜ್ಯೋತಿ ನೋಂದಣಿಗೆ ಗ್ರಾಮ ಒನ್, ಕರ್ನಾಟಕ ಒನ್ ಹಾಗು ಬೆಂಗಳೂರು ಒನ್ ಕೇಂದ್ರಗಳಲ್ಲಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿದ್ದು, ಹಣ ವಸೂಲಿ ಮಾಡುವ ಕೇಂದ್ರಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಗೃಹ ಜ್ಯೋತಿ ನೋಂದಣಿ ಸಂಪೂರ್ಣ ಉಚಿತವಾಗಿದ್ದು, ಗ್ರಾಮ ಒನ್, ಕರ್ನಾಟಕ ಒನ್ ಹಾಗು ಬೆಂಗಳೂರು ಒನ್ ಕೇಂದ್ರಗಳಲ್ಲಿ ಸೇವಾ ಶುಲ್ಕ 20 ರೂ. ಮಾತ್ರ ವಿಧಿಸಲಾಗುತ್ತಿದೆ. ಸೇವಾ ಶುಲ್ಕದ ಹೊರತಾಗಿ ಹೆಚ್ಚಿನ ಹಣ ಕೇಳಿದರೆ ಸಾರ್ವಜನಿಕರು 1912 ಸಹಾಯವಾಣಿಗೆ ಕರೆ ಮಾಡಿ ದೂರು ನೀಡಲು ಕೋರಲಾಗಿದೆ. ಹಣ ವಸೂಲಿ ಮಾಡುವ ಕೇಂದ್ರಗಳ ವಿರುದ್ಧ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಿದೆ.
Disclaimer: Above is the Press Release issued by Karnataka Energy Department