ಹಾಸನ (ಕರ್ನಾಟಕ): ಹಾಸನ ತಾಲೂಕಿನ ಮೊಸಳೆಹೊಸಹಳ್ಳಿ ಬಳಿ ಗಣೇಶೋತ್ಸವ ಮೆರವಣಿಗೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಒಂಬತ್ತು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದುರಂತಕ್ಕೆ ಕಾರಣವಾದ ವಾಹನ ಮಹಾರಾಷ್ಟ್ರ ರಿಜಿಸ್ಟ್ರೇಷನ್ನ (MH23 AU 3605) ಏರ್ಕಂಡೀಶನ್ ಟ್ಯಾಂಕರ್, ಇದು AVG Logistics ಸಂಸ್ಥೆಗೆ ಸೇರಿದ್ದು.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಈ ವಾಹನವು ಹಾಸನದಲ್ಲಿ ಸರಕು ಇಳಿಸಿ ಹೊಳೆನರಸೀಪುರ ತಾಲ್ಲೂಕಿನ ಕಟ್ಟೆಬಿಲುಗುಳಿ ಗ್ರಾಮದತ್ತ ತೆರಳುತ್ತಿದ್ದಾಗ, ಚಾಲಕ ಭುವನೇಶ್ (ಹೊಳೆನರಸೀಪುರದವನು) ನಿಯಂತ್ರಣ ಕಳೆದುಕೊಂಡಿದ್ದಾನೆ. ಮೊದಲು ಲಾರಿ ಒಂದು ಬೈಕ್ (KA41 V 4203)ಗೆ ಡಿಕ್ಕಿ ಹೊಡೆದು, ಬೈಕ್ ಸವಾರ ಪ್ರಭಾಕರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಡಿಕ್ಕಿ ಬಳಿಕ ನಿಯಂತ್ರಣ ತಪ್ಪಿದ ಲಾರಿ, ಮೆರವಣಿಗೆಯಲ್ಲಿ ಕುಣಿಯುತ್ತಿದ್ದ ನೂರಾರು ಭಕ್ತರತ್ತ ನುಗ್ಗಿ ದುರಂತ ಸೃಷ್ಟಿಸಿದೆ. ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟರೆ, ನಂತರ ಹಾಸನದ ಹಿಂಸ್ ಆಸ್ಪತ್ರೆಗೆ ದಾಖಲಾದ ನಾಲ್ವರು ಗಾಯಾಳುಗಳು ಪ್ರಾಣ ಕಳೆದುಕೊಂಡಿದ್ದಾರೆ.
Also Read: Hassan Tanker Tragedy: 9 Killed, Probe Launched into Holenarasipur Ganeshotsava Accident
ಒಟ್ಟು ಒಂಬತ್ತು ಮಂದಿ ಮೃತಪಟ್ಟಿದ್ದು, 15 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಐಸಿಯುನಲ್ಲಿ ಹಲವರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. SOCO ತಂಡ ಸ್ಥಳಕ್ಕೆ ಬಂದು ಸಾಕ್ಷ್ಯ ಸಂಗ್ರಹ ಮಾಡುತ್ತಿದೆ.
ಪೊಲೀಸರು ಲಾರಿ ಮತ್ತು ಬೈಕ್ನ್ನು ವಶಪಡಿಸಿಕೊಂಡಿದ್ದು, ಚಾಲಕನ ನಿರ್ಲಕ್ಷ್ಯ ಮತ್ತು ಭದ್ರತಾ ಲೋಪವೇ ದುರಂತಕ್ಕೆ ಕಾರಣ ಎಂಬ ಅನುಮಾನ ವ್ಯಕ್ತವಾಗಿದೆ.
ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದೆ. ಇದೇ ವೇಳೆ, ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿದ್ದು, ಘಟನೆಯ ಸಂಪೂರ್ಣ ಕಾರಣವನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ.