ಬೆಂಗಳೂರು;- ದಸರಾ ನಂತರ ಬಿಜೆಪಿ ಜತೆ ಸೀಟು ಹಂಚಿಕೆ ಕುರಿತು ಮಾತುಕತೆ ನಡೆಯಲಿದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಲೋಕಸಭಾ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿಯನ್ನ ಅಧಿಕೃತಗೊಳಿಸಿದ್ದು, ದಸರಾ ನಂತರ ಬಿಜೆಪಿ ಜತೆ ಸೀಟು ಹಂಚಿಕೆ ಮಾತುಕತೆ ನಡೆಯಲಿದೆ ಎಂದರು.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರು ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿಸಿದರು. ಸಂಸತ್ ಅಧಿವೇಶನದ ನಂತರ ನನ್ನ ಆರೋಗ್ಯ ಸ್ಥಿತಿ ಸುಧಾರಿಸಿದರೆ, ನಾನು ಅಥವಾ ಕುಮಾರಸ್ವಾಮಿ ಮತ್ತೊಮ್ಮೆ ಕೇಂದ್ರ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡುತ್ತೇವೆ ಎಂದು ದೇವೇಗೌಡ್ರು ಹೇಳಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆ ಮಾತುಕತೆಯಲ್ಲಿಹಿಂದಿನ ನಾಲ್ಕು ಚುನಾವಣೆಯ ಮತ ಗಳಿಕೆ ಒಟ್ಟುಗೂಡಿಸಿ ಒಂದು ನಿರ್ಧಾರಕ್ಕೆ ಬರಲಾಗಿದೆ. ದಸರಾ ಬಳಿಕ ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಯಲಿದೆ. ಹಿಂದಿನ ಚುನಾವಣೆಯ ಮತಗಳಿಕೆ ಒಟ್ಟು ಗೂಡಿಸಿ ಒಂದು ನಿರ್ಧಾರಕ್ಕೆ ಬರಲಾಗಿದೆ.
ಆದರೆ ಯಾವ ಕ್ಷೇತ್ರ ಅನ್ನೋ ಬಗ್ಗೆ ಇನ್ನೂ ಫೈನಲ್ ಆಗಿಲ್ಲ. ಮಂಡ್ಯ ಸೇರಿದಂತೆ ಯಾವುದೇ ತೀರ್ಮಾನ ಆಗಿಲ್ಲ. ಸದ್ಯ ಹಾಸನ ಜೆಡಿಎಸ್, ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಕೈಯಲ್ಲಿದೆ. ಉಳಿದೆಡೆ ಬಿಜೆಪಿನೇ ಇದೆ. ಕಾಂಗ್ರೆಸ್ 28 ಗೆಲ್ಲುವ ಉತ್ಸಾಹದಲ್ಲಿದ್ದಾರೆ. ಆ ಕಾರಣಕ್ಕೆ ಬಿಜೆಪಿ,ಜೆಡಿಎಸ್ ಒಂದುಗೂಡಿ ಹೋಗುವ ನಿರ್ಧಾರಕ್ಕೆ ಬಂದಿದ್ದೇವೆ ಎಂದರು.
The post HD Deve Gowda; ದಸರಾ ನಂತರ ಬಿಜೆಪಿ ಜತೆ ಸೀಟು ಹಂಚಿಕೆ ಕುರಿತು ಮಾತುಕತೆ – ಹೆಚ್ ಡಿ ದೇವೇಗೌಡರು appeared first on Ain Live News.