Home ರಾಜಕೀಯ ಹೆಚ್​ಡಿ ರೇವಣ್ಣ, ಭವಾನಿ ರೇವಣ್ಣ ಸೇರಿ 9 ಆರೋಪಿಗಳಿಗೆ ಆಗಸ್ಟ್‌ 28 ರಂದು ಖುದ್ದು ಹಾಜರಾಗುವಂತೆ...

ಹೆಚ್​ಡಿ ರೇವಣ್ಣ, ಭವಾನಿ ರೇವಣ್ಣ ಸೇರಿ 9 ಆರೋಪಿಗಳಿಗೆ ಆಗಸ್ಟ್‌ 28 ರಂದು ಖುದ್ದು ಹಾಜರಾಗುವಂತೆ ಕೋರ್ಟ್​ನಿಂದ ಸಮನ್ಸ್​ ಜಾರಿ

29
0
HD Revanna and Bhavani Revanna

ಬೆಂಗಳೂರು: ಕೆಆರ್​ ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್​ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿ 9 ಆರೋಪಿಗಳಿಗೆ ಸಮನ್ಸ್​ ಜಾರಿ ಮಾಡಲಾಗಿದೆ. ಆಗಸ್ಟ್‌ 28 ರಂದು ಖುದ್ದು ಹಾಜರಾಗುವಂತೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್​ನಿಂದ ಸಮನ್ಸ್​ ಜಾರಿ ಮಾಡಲಾಗಿದೆ.

ಆರೋಪಿ ಭವಾನಿ ರೇವಣ್ಣಗೆ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಪ್ರಶ್ನಿಸಿ ಎಸ್‌ಐಟಿ ಅಧಿಕಾರಿಗಳು, ಸುಪ್ರೀಂಕೋರ್ಟ್‌ಗೆ ಇತ್ತೀಚೆಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್‌ನ ದ್ವಿಸದಸ್ಯ ಪೀಠ ಭವಾನಿ ರೇವಣ್ಣಾಗೆ ನೊಟೀಸ್ ಜಾರಿ ಮಾಡಿದ್ದರು. ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ.

ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ಪ್ರಶ್ನಿಸಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ ವಿಚಾರಣೆ ಎದುರಿಸಬೇಕು ಎಂದು ಹೇಳಿತ್ತು. ಮಗನ ಮೇಲೆ ಗಂಭೀರವಾದ ಆರೋಪಗಳಿವೆ, ಮಗ ಮಾಡಿದ ತಪ್ಪಿಗೆ ತಾಯಿಯ ಪಾತ್ರವೇನು ಅಂತಾ ಎಸ್ಐಟಿ ಪರ ವಕೀಲ ಕಪಿಲ್‌ ಸಿಬಲ್‌ಗೆ ನ್ಯಾಯಪೀಠ ಪ್ರಶ್ನೆ ಮಾಡಿದ್ದರು.

LEAVE A REPLY

Please enter your comment!
Please enter your name here