ಬೆಂಗಳೂರು;– ನಗರದಲ್ಲಿ ಅಳವಡಿಸಲಾದ ಅಕ್ರಮ ಜಾಹೀರಾತು ತಡೆಯುವಲ್ಲಿ ವಿಫಲವಾದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೈಕೋರ್ಟ್ಗೆ ಬಿಬಿಎಂಪಿ ಮಾಹಿತಿ ನೀಡಿದೆ.
ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠಕ್ಕೆ ಬಿಬಿಎಂಪಿ ಪರ ವಕೀಲರು ಮಾಹಿತಿ ನೀಡಿದರು.
ಈ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಪ್ರಕ್ರಿಯೆ ಆರಂಭಿಸಿದರೆ ಸಾಲದು. ಆ ಪ್ರಕ್ರಿಯೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಬೇಕು ಎಂದು ಸೂಚನೆ ನೀಡಿ ವಿಚಾರಣೆ ಮುಂದೂಡಿತು. ಅಲ್ಲದೇ, ಮುಂದಿನ ವಿಚಾರಣೆ ವೇಳೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವ ಪ್ರಕ್ರಿಯೆ ಆರಂಭಿಸಿದ ನಂತರ ನಡೆದಿರುವ ಬೆಳವಣಿಗೆಗಳ ಮಾಹಿತಿ ನೀಡಬೇಕು.
ಬೆಂಗಳೂರು ನಗರದಾದ್ಯಂತ ಅಳವಡಿಕೆ ಆಗಿರುವ ಜಾಹೀರಾತು ಸಮೀಕ್ಷೆ ನಡೆಸಬೇಕು. ಅವುಗಳಲ್ಲಿ ಎಷ್ಟಕ್ಕೆ ಅಳವಡಿಸಲು ಅನುಮತಿ ನೀಡಲಾಗಿದೆ. ಅವುಗಳು ಬಿಬಿಎಂಪಿಗೆ ಅಗತ್ಯ ಶುಲ್ಕ ಕಟ್ಟಿವೆಯೇ, ಅಕ್ರಮ ಅಳವಡಿಕೆಯಾಗಿದ್ದರೆ ಅವುಗಳ ವಿರುದ್ದ ಯಾವ ಕ್ರಮ ಜರುಗಿಸಲಾಗಿದೆ. ಕಳೆದ ಮೂರು ವರ್ಷದಲ್ಲಿ ಎಷ್ಟು ಜಾಹೀರಾತು ಅಳವಡಿಕೆಗೆ ಅನುಮತಿ ನೀಡಲಾಗಿದೆ. ಜಾಹೀರಾತುದಾರರು ಎಷ್ಟು ಹಣ ಶುಲ್ಕ ಪಾವತಿ ಮಾಡಿದ್ದಾರೆ ಎಂಬ ಬಗ್ಗೆ ವರದಿ ಸಲ್ಲಿಸುಂತೆ ಬಿಬಿಎಂಪಿಗೆ ನಿರ್ದೇಶನ ವಿಚಾರಣೆ ಮುಂದೂಡಿತು.
The post High Court; ಅಕ್ರಮ ಜಾಹೀರಾತುಗಳ ಹಾವಳಿ ತಡೆಗೆ ಕ್ರಮಕ್ಕೆ ಮುಂದಾಗದ ಅಧಿಕಾರಿಗಳ ವಿರುದ್ಧ ಕ್ರಮ – ಬಿಬಿಎಂಪಿ ಮಾಹಿತಿ appeared first on Ain Live News.