ಬೆಂಗಳೂರು;- ಉಡುಪಿಯ ಪರಶುರಾಮ ಥೀಮ್ ಪಾರ್ಕ್ ಪ್ರಶ್ನಿಸಿ ಪ್ರಮೋದ್ ಮುತಾಲಿಕ್ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಹೈಕೋರ್ಟ್ ವಜಾ ಮಾಡಿದೆ.
ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಕೈಗೆತ್ತಿಕೊಂಡಿತು. ಅರ್ಜಿದಾರರು ಸಾಕಷ್ಟು ವಿಳಂಬವಾಗಿ ಸಲ್ಲಿಕೆ ಮಾಡಿದ್ದಾರೆ. ಅರ್ಜಿಯಲ್ಲಿನ ಎಲ್ಲ ಅಂಶಗಳು ಅರ್ಜಿದಾರರ ಊಹೆಯಂತಿವೆ. ಸ್ವಂತ ಅಭಿಪ್ರಾಯದ ಮೂಟೆ ಆಗಿದೆ. ಇದೊಂದು ಸಾರಾಸಗಟಾಗಿ ತಳ್ಳಿಹಾಕುವಂತಹ ಅರ್ಜಿ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಈಗಾಗಲೇ ಥೀಮ್ ಪಾರ್ಕ್ ಕಾಮಗಾರಿ ಮುಗಿಯುವ ಹಂತದಲ್ಲಿದೆ. ಈ ಹಿಂದೆ ಯಾವತ್ತೂ ಆಕ್ಷೇಪವೆತ್ತದ ಅರ್ಜಿದಾರರು ಈಗ ಏಕಾಏಕಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಅಷ್ಟಕ್ಕೂ ಅರ್ಜಿದಾರರು ಸ್ಥಳೀಯರಲ್ಲ. ಸ್ಥಳೀಯ ಗ್ರಾಮಸ್ಥರು ಕೋರ್ಟ್ಗೆ ಯಾಕೆ ಬಂದಿಲ್ಲ. ಗೋಮಾಳ ಜಾಗವನ್ನು ಥೀಮ್ ಪಾರ್ಕ್ಗೆ ಬಳಕೆ ಮಾಡಲಾಗುತ್ತಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ. ಆದರೆ, ಇದರಿಂದ ಪಶುಸಂಗೋಪನೆಗೆ ತೊಂದರೆ ಆಗಲಿದೆ ಎಂದು ಗ್ರಾಮಸ್ಥರಾಗಲಿ ಅಥವಾ ನೆರೆಯ ಗ್ರಾಮಸ್ಥರು ಯಾರೂ ಆತಂಕ ವ್ಯಕ್ತಪಡಿಸಿಲ್ಲ. ಅರ್ಜಿಯಲ್ಲಿ ವಿಚಾರಣೆಗೆ ಪರಿಗಣಿಸುವಂತದ್ದೇನೂ ಇಲ್ಲ. ಅಲ್ಲದೇ ಬಹಳ ತಡವಾಗಿ ಅರ್ಜಿದಾರರು ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ ಎಂದು ನ್ಯಾಯಾಲಯ ಹೇಳಿತು.
The post High Court; ಗೋಮಾಳ ಜಮೀನಿನಲ್ಲಿ ಪರಶುರಾಮ ಥೀಮ್ ಪಾರ್ಕ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ appeared first on Ain Live News.