Bengaluru Karaga Mahotsava: ನಾಳೆಯಿಂದ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ಆರಂಭ
ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಏ.15ರಂದು ಚಾಲನೆ ದೊರೆಯಲಿದೆ. ಏ.15ರಿಂದ 23ರ ವರೆಗೆ ಕರಗ ಮಹೋತ್ಸವ ನಡೆಯಲಿದೆ.
ಏ.23ರ ಚೈತ್ರ ಪೌರ್ಣಮಿಯಂದು ಕರಗ ಮಹೋತ್ಸವ ಕೊನೆಗೊಳ್ಳಲಿದೆ. ಪ್ರತಿ ವರ್ಷದಂತೆ ಈ ಬಾರಿಯ ಕರಗ ಮಹೋತ್ಸವವನ್ನು ಅದ್ದೂರಿಯಾಗಿ ನೆರವೇರಿಸಲು ಧರ್ಮರಾಯಸ್ವಾಮಿ ದೇವಾಲಯದ ಆಡಳಿತ ಮಂಡಳಿ ಸಕಲ ಸಿದ್ಧತೆ ಮಾಡಿಕೊಂಡಿದೆ.
ಕರಗ ಕಾರ್ಯಕ್ರಮದ ವೇಳಾಪಟ್ಟಿ:
ಏ.15ರ ರಾತ್ರಿ 10ಕ್ಕೆ ರಥೋತ್ಸವ ಧ್ವಜಾರೋಹಣ
ಏ.16ರಿಂದ 19 ಪ್ರತಿ ದಿನ ವಿಶೇಷ ಪೂಜೆ ಮತ್ತು ಮಂಗಳಾರತಿ
ಏ.21ಕ್ಕೆ ಹಸಿ ಕರಗ ಆಯೋಜನೆ
ಏ.23 ರಂದು ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯ ರಥೋತ್ಸವ
ಏ.24 ರಂದು ದೇವಸ್ಥಾನದಲ್ಲಿ ಗಾವು ಪೂಜೆ
ಏ.25 ಕ್ಕೆ ಕೊನೆಯ ದಿನದ ವಸಂತೋತ್ಸವ ಧ್ವಜಾರೋಹಣ ನೆರವೇರಲಿದೆ.