Home ಅಪರಾಧ ಐಎಂಎ ಬಹುಕೋಟಿ ವಂಚನೆ: ಬಿಡಿಎ ವಿಶೇಷ ಭೂಸ್ವಾಧೀನಾಧಿಕಾರಿ ಸಿಬಿಐ ಬಲೆಗೆ

ಐಎಂಎ ಬಹುಕೋಟಿ ವಂಚನೆ: ಬಿಡಿಎ ವಿಶೇಷ ಭೂಸ್ವಾಧೀನಾಧಿಕಾರಿ ಸಿಬಿಐ ಬಲೆಗೆ

103
0

ಬೆಂಗಳೂರು:

ಐಎಂಎ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಬಿಐ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬಿಡಿಎ ವಿಶೇಷ ಭೂಸ್ವಾಧೀನಾಧಿಕಾರಿ ಪಿ.ಡಿ.ಕುಮಾರ್ ಬಂಧಿತ ಆರೋಪಿಯಾಗಿದ್ದು, ಈತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಮೊಹಮ್ಮದ್ ಮನ್ಸೂರ್​ ಖಾನ್ ಹಣ ರಿಯಲ್ ಎಸ್ಟೇಟ್​ ವಲಯದಲ್ಲಿ ಹೂಡಿಕೆಯಾಗಿದೆ. ಮನ್ಸೂರ್ ಖಾನ್ ನಿಂದ 3 ರಿಂದ4 ಕೋಟಿ ರೂ. ಹಣವನ್ನು ಪಿ.ಡಿ. ಕುಮಾರ್ ಪಡೆದಿದ್ದರು ಎಂದು ಆರೋಪಿಸಿ ಕುಮಾರ್​ ವಿರುದ್ಧ ಸಿಬಿಐ ಅಧಿಕಾರಿಗಳು ಎಫ್ ಐಆರ್ ದಾಖಲಿಸಿದ್ದರು.

ಪಿಡಿ ಕುಮಾರ್​ ಅವರನ್ನು ಬಂಧಿಸಿದ ಅಧಿಕಾರಿಗಳು ಸಿಬಿಐ ವಿಶೇಷ ನ್ಯಾಯಾಲಯದ ಎದುರು ಹಾಜರುಪಡಿಸಿದ್ದರು.

ನಂತರ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಗಾಗಿ ಕುಮಾರ್​ ಅವರನ್ನು 3 ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ ಆದೇಶಿಸಿದೆ.

LEAVE A REPLY

Please enter your comment!
Please enter your name here