Home ಬೆಂಗಳೂರು ನಗರ ಚಾರಿತ್ರ್ಯಹರಣ ತಡೆಯಲು ಸುಳ್ಳು ಸುದ್ದಿ, ಅಪಪ್ರಚಾರ ನಿರ್ಬಂಧಕ್ಕೆ ಮನವಿ: ಸುಧಾಕರ್

ಚಾರಿತ್ರ್ಯಹರಣ ತಡೆಯಲು ಸುಳ್ಳು ಸುದ್ದಿ, ಅಪಪ್ರಚಾರ ನಿರ್ಬಂಧಕ್ಕೆ ಮನವಿ: ಸುಧಾಕರ್

63
0
MLA Dr K Sudhakar

ಇವೆಲ್ಲ ರಾಜಕೀಯ ಷಡ್ಯಂತ್ರ, ತೇಜೋವಧೆಗೆ ಮಾಧ್ಯಮಗಳ ಬಳಕೆ

ಬೆಂಗಳೂರು:

ರಾಜ್ಯದಲ್ಲಿ ರಾಜಕೀಯ ಷಡ್ಯಂತ್ರ ನಡೆಯುತ್ತಿದ್ದು, ಮಾಧ್ಯಮಗಳನ್ನು ಬಳಸಿಕೊಂಡು ತೇಜೋವಧೆ ಮಾಡುವ ಕೆಲಸವಾಗುತ್ತಿದೆ. ಇದನ್ನು ತಡೆಯಲು ನ್ಯಾಯಾಲಯದ ಮೊರೆ ಹೋಗಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಮಾಧ್ಯಮಗಳಲ್ಲಿ ಎಲ್ಲವೂ ಬರುತ್ತದೆ. ಇದರಿಂದಾಗಿ ಅನೇಕ ವರ್ಷಗಳಿಂದ ಸಂಪಾದಿಸಿದ ಜನಪ್ರಿಯತೆ ಹೆಸರು, ಗೌರವ ಹಾಳಾಗಿ ಚಾರಿತ್ರ್ಯವಧೆಯಾಗುತ್ತದೆ. ಇದಕ್ಕೆ ಇತಿಶ್ರೀ ಹಾಡಲು ಈ ರೀತಿ ಮಾಡಿದ್ದೇವೆ. ಇದಕ್ಕೆ ತಡೆಹಾಕಲು ಬಲವಾದ ಕಾನೂನು ರೂಪಿಸಲು ಚಿಂತನೆ ನಡೆದಿದೆ ಎಂದರು.

ರಾಜಕಾರಣ ಮಾತ್ರವಲ್ಲದೆ, ಬೇರೆ ಕ್ಷೇತ್ರಗಳಲ್ಲೂ ಈ ರೀತಿ ನಡೆಯುತ್ತದೆ. ಒಬ್ಬ ವ್ಯಕ್ತಿಯ ತೇಜೋವಧೆ ಮಾಡಲು ತಪ್ಪು ಮಾಹಿತಿ ನೀಡಿ, ಅದಕ್ಕಾಗಿ ಸಾಮಾಜಿಕ ಜಾಲತಾಣ, ಮಾಧ್ಯಮ ಬಳಸಿಕೊಳ್ಳಲಾಗುತ್ತಿದೆ. ನೈಜತೆ ಇದ್ದಲ್ಲಿ ಅದನ್ನು ಯಾರೂ ನಿಷೇಧ ಮಾಡಲು ಸಾಧ್ಯವಿಲ್ಲ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ತಪ್ಪು ಯಾರೇ ಮಾಡಿದ್ದರೂ ಅವರಿಗೆ ಶಿಕ್ಷಯಾಗಬೇಕು. ಆದರೆ ತೇಜೋವಧೆ ಮಾಡಬಾರದು. ಆರೋಪ ಮಾಡುವವರು ನೇರವಾಗಿ ನ್ಯಾಯಾಲಯಕ್ಕೆ ಹೋಗಬಹುದು. ಆದರೆ ಇಂತಹವರು ನ್ಯಾಯಾಲಯಕ್ಕೆ ಹೋಗದೆ ಬೇರೆ ಮಾರ್ಗ ಹಿಡಿದು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಇದು ಹೊಸ ಅನೈತಿಕ, ಮೌಲ್ಯರಹಿತ ಟ್ರೆಂಡ್ ಆಗಿದೆ ಎಂದರು.

ರಷ್ಯಾ, ದುಬೈನಿಂದ ವೀಡಿಯೋ ಹಾಕುವುದು, ಸಾಮಾಜಿಕ ಜಾಲತಾಣ ಬಳಸಿಕೊಳ್ಳುವುದನ್ನು ನೋಡಿದರೆ ಇದು ಷಡ್ಯಂತ್ರ ಎನಿಸುವುದಿಲ್ಲವೇ? ಸಾರ್ವಜನಿಕ ಬದುಕಿನಲ್ಲಿ ಹಲವಾರು ವರ್ಷಗಳಿಂದ ಇದ್ದವರಿಗೆ ಸಾಮಾಜಿಕ ಬದ್ಧತೆ, ಕಳಕಳಿ ಇರುತ್ತದೆ. ಯಾವುದೇ ಆರೋಪ ಬಂದಾಗ ಅದನ್ನು ಪರಾಮರ್ಶಿಸಬೇಕು. ನೈಜತೆ ಇದ್ದಲ್ಲಿ 24 ಗಂಟೆಯೂ ಸುದ್ದಿ ಪ್ರಸಾರ ಮಾಡಬಹುದು ಎಂದರು.

ಚಾರಿತ್ರ್ಯಹರಣವಾಗಬಾರದು ಎಂಬ ಕಾರಣಕ್ಕೆ ಇಂಜೆಂಕ್ಷನ್ ಪಡೆಯುವ ಪ್ರಯತ್ನ ಪಡೆಯಲಾಗಿದೆ. ಈಗ ಹಿಟ್ ಆ್ಯಂಡ್ ರನ್ ಜನರಿಂದಾಗಿ ಭಯಪಡಬೇಕಾಗಿದೆ. ಸಂತ್ರಸ್ತರು, ಅನ್ಯಾಯಕ್ಕೊಳಗಾದವರು ಇನ್ನೂ ಮುಖ್ಯವಾಹಿನಿಗೆ ಬಂದಿಲ್ಲ. ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದರು.

ಇದನ್ನು ಓದು: ಕೋರ್ಟ್ ಮೊರೆ ಹೋದ ಆರು ಸಚಿವರು https://kannada.thebengalurulive.com/six-karnataka-ministers-approaches-court-against-media-houses/

LEAVE A REPLY

Please enter your comment!
Please enter your name here