ಬೆಂಗಳೂರು:
ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಇಂದು ಜೆ. ಮಂಜುನಾಥ್ ಅವರು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿಗಳಾದ ಜಿ ಎನ್ ಶಿವಮೂರ್ತಿ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಅನಿತಾ ಲಕ್ಷ್ಮೀ ಅವರು ಉಪಸ್ಥಿತರಿದ್ದರು.
![ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಜೆ. ಮಂಜುನಾಥ್ ಅಧಿಕಾರ ಸ್ವೀಕಾರ 1 J Manjunath takes over as Bengaluru Urban Deputy Commissioner 1](https://kannada.thebengalurulive.com/wp-content/uploads/2021/02/J-Manjunath-takes-over-as-Bengaluru-Urban-Deputy-Commissioner-1.jpg)
ನೂತನ ಜಿಲ್ಲಾಧಿಕಾರಿಗಳಾಗಿ ಇಂದು ಪ್ರಭಾರ ವಹಿಸಿಕೊಂಡ ಜೆ ಮಂಜುನಾಥ್ ಅವರು ತಮ್ಮ ಕಚೇರಿಯಲ್ಲಿ ಸೇವಾಲಾಲ್ ಜಯಂತಿ ಪ್ರಯುಕ್ತ ಸಂತ ಶ್ರೇಷ್ಠರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿದರು.