Home ರಾಜಕೀಯ ಜೆಡಿಎಸ್ ಸಂಘಟನೆ ಮತ್ತು ಬಲವರ್ಧನೆಗೆ ಕ್ರಮ: ಹೆಚ್.ಡಿ. ದೇವೇಗೌಡ

ಜೆಡಿಎಸ್ ಸಂಘಟನೆ ಮತ್ತು ಬಲವರ್ಧನೆಗೆ ಕ್ರಮ: ಹೆಚ್.ಡಿ. ದೇವೇಗೌಡ

30
0
former Prime Minister HD Devegowda addressing media on Saturday in Bengaluru
ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ

ಬೆಂಗಳೂರು:

ಜನತಾದಳ (ಜಾತ್ಯತೀತ) ಪಕ್ಷದ ಸಂಘಟನೆ ಮತ್ತು ಬಲವರ್ಧನ ಒಳಗೊಂಡಂತೆ 2023ರಲ್ಲಿ ನಡೆಯಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಬಹುಮತಗಳಸುವ ನಿಟ್ಟಿನಲ್ಲಿ ಸಾಕಷ್ಟು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.

ಈ ಕುರಿತು ಅವರು ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ವಿವರವಾದ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಪಕ್ಷದ ವತಿಯಿಂದ ಇತ್ತೀಚೆಗೆ ಮಿಷನ್-123 ಹಮ್ಮಿಕೊಳ್ಳಲಾಗಿತ್ತು. ಪಕ್ಷದ ಧೈಯ ಉದ್ದೇಶಗಳನ್ನು ಒಳಗೊಂಡಿರುವ ಸಮಾಜದ ಎಲ್ಲ ವರ್ಗ ಮತ್ತು ಸಮುದಾಯದವರ ಏಳಿಗೆಗೆ ಯೋಜನೆಗಳನ್ನು ರೂಪಿಸಲು ಚಿಂತನ – ಮಂಥನ ನಡೆಸಲಾಗಿದೆ. ಪಕ್ಷದ ಹಿರಿಯ ಮುಖಂಡರು, ಶಾಸಕರು, ಮಾಜಿ ಶಾಸಕರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಮತ್ತು ಪ್ರಮುಖರು ಸೇರಿದಂತೆ ಪ್ರಮುಖ ಮಹಿಳಾ ಮುಖಂಡರು, ಯುವ ಮತ್ತು ವಿದ್ಯಾರ್ಥಿ ಮುಖಂಡರು, ಮುಸ್ಲಿಂ ಅಲ್ಪಸಂಖ್ಯಾತ ಮುಖಂಡರು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಮುಖಂಡರು, ಕ್ರೈಸ್ತ | ಅಲ್ಪಸಂಖ್ಯಾತರ ಮುಖಂಡರುಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು ಎಂದು ಅವರು ವಿವರಿಸಿದ್ದಾರೆ.

ರಾಜ್ಯದ ಒಟ್ಟು 224 ವಿಧಾನಸಭಾ ಕ್ಷೇತ್ರಗಳಲ್ಲಿ ಈಗಾಗಲೇ ಪಕ್ಷದಿಂದ ಚುನಾಯಿತರಾಗಿರುವ 35 ಶಾಸಕರೂ ಒಳಗೊಂಡ ಕ್ಷೇತ್ರಗಳು, ಕಳೆದ 2018ನೇ ವಿಧಾನಸಭಾ ಚುನಾವಣೆಯಲ್ಲಿ ಅತ್ಯಲ್ಪ ಮತಗಳಿಂದ ಸೋಲು ಕಂಡ ಕ್ಷೇತ್ರಗಳು ಮತ್ತು ಉಳಿದ ಕ್ಷೇತ್ರಗಳಲ್ಲಿ ಪಕ್ಷದ ಸಂಘಟನೆ ಮತ್ತು ಪಕ್ಷದ ಕಾರ್ಯಕರ್ತರ ಪಡೆ ಇರುವ ಕ್ಷೇತ್ರಗಳನ್ನು ಗುರುತಿಸಲಾಗಿದೆ. ಈ ಕ್ಷೇತ್ರದಿಂದ ಸ್ಪರ್ಧಿಸಲು 123 ಅಭ್ಯರ್ಥಿಗಳನ್ನು ಗುರುತಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ. ಗುರುತಿಸಲಾಗಿರುವ ಕ್ಷೇತ್ರಗಳಲ್ಲಿ ಕಾರ್ಯಪ್ರವೃತ್ತರಾಗಲು, ಕ್ಷೇತ್ರದ ಉದ್ದಗಲಕ್ಕೂ ಸಂಚರಿಸಿ, ಪಕ್ಷದ ಸಂಘಟನೆ, ಪಕ್ಷದ ಕಾರ್ಯಕರ್ತರ ಮತ್ತು ಮುಖಂಡರೊಂದಿಗೆ ಸಂಪರ್ಕ, ಚರ್ಚೆ ಮತ್ತು ಕ್ಷೇತ್ರದ ಸಮಸ್ಯೆಗಳ ಅಧ್ಯಯನ ಮತ್ತು ಅಭ್ಯರ್ಥಿಯು ತನ್ನ ವರ್ಚಸ್ಸನ್ನು ವೃದ್ಧಿಗೊಳ್ಳಲು ರೂಪಿಸಿಕೊಳ್ಳಬೇಕಾದ ಕಾರ್ಯತಂತ್ರದ ಬಗ್ಗೆ ಸಮೀಕ್ಷೆ ನಡೆಸಲು ಒಂದು ಪ್ರಶ್ನಾವಳಿ ತಯಾರಿಸಿ ಅಭ್ಯರ್ಥಿಗಳಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ. ಇಂತಹ ಸಮೀಕ್ಷೆಯನ್ನು ನಡೆಸಿ ಒಂದು ತಿಂಗಳೊಳಗೆ ಪ್ರಶ್ನಾವಳಿಗಳಿಗೆ ಉತ್ತರವನ್ನು ಹಿಂದಿರುಗಿಸಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ. ಅಲ್ಲದೇ, ಅಭ್ಯರ್ಥಿಗಳು ನಡೆಸುವ ಸಮೀಕ್ಷೆ ಬಗ್ಗೆ ನಿಗಾ ಇಡಲು ಬೇರೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವಿವರಿಸಿದ್ದಾರೆ.

ಸಮಾಜದ ವಿವಿಧ ವರ್ಗ ಸಮುದಾಯಗಳ ಪ್ರಗತಿಗಾಗಿ ಪಂಚರತ್ನ ಯೋಜನೆಗಳನ್ನು ರೂಪಿಸಲಾಗಿದೆ ಎಂದಿರುವ ಅವರು ಕೇವಲ ರೈತರ ಸಾಲ ಮನ್ನಾದಿಂದ ರೈತನನ್ನು ಸಾಲದ ಸಂಕೋಲೆಯಿಂದ ತಪ್ಪಿಸಲು ಸಾಧ್ಯವಿಲ್ಲ. ರೈತರಿಗೆ ಸಕಾಲದಲ್ಲಿ ಅಗತ್ಯವಿರುವ ಉತ್ತಮ ಗುಣಮಟ್ಟದ ಬೀಜ,ಕೀಟನಾಶಕ ಮತ್ತು ಗೊಬ್ಬರ-ರಸಗೊಬ್ಬರವನ್ನು ರೈತನ ಬೆಳೆ ಆಧಾರಿತ ಮೇಲೆ ಒದಗಿಸಲು, ರೈತ ಬೆಳೆದ ಬೆಳೆಗಳನ್ನು ಮತ್ತು ಅವುಗಳನ್ನು ಆಧುನಿಕ ರೀತಿಯಲ್ಲಿ ಸಂಸ್ಕರಿಸಿ ಶೇಖರಣೆ ಮಾಡಲು ಮತ್ತು ಉತ್ತಮ ಬೆಲೆ ದೊರಕಿಸುವಂತೆ ಯೋಜನೆಗಳನ್ನು ರೂಪಿಸಲಾಗಿದೆ ಎಂದು ವಿವರಿಸಿದ್ದಾರೆ. .ಪಕ್ಕದಲ್ಲಿನ ಕಾರ್ಯಕರ್ತರೊಂದಿಗೆ ಮತ್ತು ಪ್ರಮುಖರೊಂದಿಗೆ ವಿಧಾನಸಭಾ ಕ್ಷೇತ್ರಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳು ಸಮನ್ವಯತೆ ಹೊಂದಾಣಿಕ ಸಾಧಿಸುವಂತೆ ಕ್ರಮ ವಹಿಸಲಾಗುತ್ತದೆ ಎಂದು ವಿವರಿಸಿದ್ದಾರೆ.

ಕಾರ್ಯಾಗಾರದಲ್ಲಿ ಚರ್ಚಿಸಿದ ವಿಷಯಗಳು, ಯೋಜನೆಗಳ ಅನಷ್ಠಾನ ಒಳಗೊಂಡಂತೆ ಹಾಗೂ ಮುಂಬರುವ ವಿಧಾನಸಭಾ ಚುನಾವಣೆಗೆ ಅಗತ್ಯವಿರುವ ಸಿದ್ಧತೆಗಳ ಬಗ್ಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳು ಮತ್ತು ಪಕ್ಷದ ಜಿಲ್ಲಾ ಮತ್ತು ತಾಲ್ಲೂಕು ಘಟಕದ ಅಧ್ಯಕ್ಷರು ಹಾಗೂ ಪಕ್ಷದ ವಿವಿಧ ವಿಭಾಗಳ ಮುಖ್ಯಸ್ಥರುಗಳ ನಡುವೆ ಹೊಂದಾಣಿಕ ಸಮನ್ವಯತ ಒಗ್ಗೂಡಿಸಲು ನವೆಂಬರ್ ತಿಂಗಳಲ್ಲಿ ಪಕ್ಷದ ರಾಜ್ಯ ಕಚೇಲಿಯಲ್ಲಿ ಪ್ರತಿ ದಿನ ಬೆಳಗ್ಗೆ ಎರಡು ಜಿಲ್ಲೆಗಳು ಮತ್ತು ಮಧ್ಯಾಹ್ನ ಎರಡು ಜಿಲ್ಲೆಗಳ ವಿಮರ್ಶನಾ ಸಭೆಗಳನ್ನು ಆಯೋಜಿಸಲಾಗುವುದು. ಎಂದು ವಿವರಿಸಿದ್ದಾರೆ.

LEAVE A REPLY

Please enter your comment!
Please enter your name here