Home ಬೆಂಗಳೂರು ನಗರ ಲೋಕಾಯುಕ್ತ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿಗೆ ಸಚಿವ ಸಂಪುಟ ಅಸ್ತು

ಲೋಕಾಯುಕ್ತ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿಗೆ ಸಚಿವ ಸಂಪುಟ ಅಸ್ತು

15
0
Karnataka Lokayukta.jpg1.jpg
Advertisement
bengaluru

ಬೆಂಗಳೂರು:

ಲೋಕಾಯುಕ್ತ ಪ್ರಕರಣದಲ್ಲಿ ತಪ್ಪಿತಸ್ಥರಾಗಿರುವ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ನೀಡಲು ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಎಚ್​.ಕೆ. ಪಾಟೀಲ್ ಅವರು, ಸಚಿವ ಸಂಪುಟ ಸಭೆಯಲ್ಲಿ ಒಟ್ಟು 16 ವಿಷಗಳ ಮೇಲೆ ಚರ್ಚೆ ನಡೆದಿದೆ ಎಂದರು.

ಲೋಕಾಯುಕ್ತ ಪ್ರಕರಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಡಾ.ಎಂ. ಎಚ್. ನಾಗೇಶ್ ಅವರಿಗೆ ಐದು ವರ್ಷ ಜೈಲು ಶಿಕ್ಷೆ ಆಗಿರುವ ಹಿನ್ನೆಲೆಯಲ್ಲಿ ಅವರಿಗೆ ಕಡ್ಡಾಯ ನಿವೃತ್ತಿ ನೀಡಲು ಅನುಮೋದನೆ ನೀಡಲಾಗಿದೆ ಎಂದು ಎಚ್ ಕೆ ಪಾಟೀಲ್ ಅವರು ತಿಳಿಸಿದ್ದಾರೆ.

bengaluru bengaluru

ಇನ್ನು ಲೋಕಾಯುಕ್ತರ ಬಲೆಗೆ ಬಿದ್ದಿದ್ದ ರಾಮನಗರ ಜಿಲ್ಲಾ ಆಸ್ಪತ್ರೆ ಸ್ತ್ರೀ ರೋಗ ತಜ್ಞೆ ಡಾ‌.ಉಷಾ ಕದರಮಂಡಲಗಿ, ಇಂದಿರಾನಗರ ಆಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ.ಎಸ್.ಟಿ ನಾಗಮಣಿ ಅವರಿಗೆ ಕಡ್ಡಾಯ ನಿವೃತ್ತಿ ದಂಡನೆಗೆ ಸಂಪುಟ ನಿರ್ಣಯ ಕೈಗೊಂಡಿದೆ ಎಂದು ಸಚಿವರು ಹೇಳಿದ್ದಾರೆ.

ಅಲ್ಲದೆ, ಪೋಕ್ಸೋ ಜೈಲು ಶಿಕ್ಷೆಗೆ ಗುರಿಯಾಗಿರುವ ಹೂವಿನಹಡಗಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಎನ್ ಹಳ್ಳಿಗುಡಿ ಅವರನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.


bengaluru

LEAVE A REPLY

Please enter your comment!
Please enter your name here