
ಬೆಂಗಳೂರು:
ಬಜೆಟ್ ಮಂಡನೆಗೆ ಸಂಬಂಧಪಟ್ಟಂತೆ ಇಂದಿನಿಂದ ಇಲಾಖಾವಾರು ಬಜೆಟ್ ಪೂರ್ವಭಾವಿ ಸಭೆ ಆರಂಭವಾಗಲಿದೆ. ಇಂದು ಬೆಳಿಗ್ಗೆ 11 ಗಂಟೆಯಿಂದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ.

ಹಣಕಾಸು ಸಚಿವರು ಆಗಿರುವ ಸಿಎಂ ಸಿದ್ದರಾಮಯ್ಯ ಈ ಹಿಂದೆ 13 ಬಾರಿ ಬಜೆಟ್ ಮಂಡಿಸಿದ್ದು ಇದೀಗ 14ನೇ ಬಾರಿಗೆ ಬಜೆಟ್ ಮಂಡನೆಗೆ ಸಿದ್ಧತೆ ನಡೆಸಲಿದ್ದಾರೆ. ಗ್ಯಾರಂಟಿ ಯೋಜನೆಗಳೊಂದಿಗೆ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಈ ಬಾರಿ ಯಾವುದಕ್ಕೆ ತೆರಿಗೆ ವಿಧಿಸಲಿದೆ, ಯಾವುದಕ್ಕೆ ಎಷ್ಟು ವಿನಾಯ್ತಿ ನೀಡಲಿದೆ, ಯಾವ ಹೊಸ ಯೋಜನೆ ಜಾರಿಗೆ ತರಲಿದೆ, ಸರ್ಕಾರದ ವಿವಿಧ ಇಲಾಖೆಗಳ ಯೋಜನೆಗಳಿಗೆ, ಕೆಲಸಗಳಿಗೆ ಎಷ್ಟು ಹಣ ವಿನಿಯೋಗ ಮಾಡಲಿದೆ ಎಂಬುದು ಗೊತ್ತಾಗಲಿದೆ.