ಬೆಂಗಳೂರು:
ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಅಭಿಯಾನವನ್ನು ಕೈಗೊಂಡು ಲಸಿಕೆ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶಿಸಿದ್ದಾರೆ.
![ನಿರ್ಬಂಧ ಹೇರದೆ ಲಸಿಕೆ ಹಾಕಲು ಜಿಲ್ಲಾಧಿಕಾರಿಗಳಿಗೆ ಸೂಚನೆ 1 Karnataka Chief Secretary directs District Collectors to vaccinate people without restriction](https://kannada.thebengalurulive.com/wp-content/uploads/2021/09/Karnataka-Chief-Secretary-directs-District-Collectors-to-vaccinate-people-without-restriction.jpg)
ಕೋವಿಡ್ ಲಸಿಕೆ ಪಡೆಯದ ಸಾರ್ವಜನಿಕರಿಗೆ ಪಿಂಚಣಿ ಮತ್ತು ಪಡಿತರವನ್ನು ನೀಡುವುದಿಲ್ಲವೆಂಬ ವರದಿಗಳು ಪತ್ರಿಕೆಗಳಲ್ಲಿ ವರದಿಯಾಗಿದ್ದು ಸರ್ಕಾರದ ಗಮನಕ್ಕೆ ಬಂದಿದೆ. ಪಿಂಚಣಿ ಹಾಗೂ ಪಡಿತರವನ್ನು ಯಾವುದೇ ಕಾರ್ಯಕ್ರಮ/ ಯೋಜನೆಗಳಿಗೆ ಜೋಡಿಸಿರುವುದಿಲ್ಲ. ಲಸಿಕಾ ಕಾರ್ಯವನ್ನು ತಪ್ಪಾಗಿ ಜೋಡಿಸಿದ್ದಲ್ಲಿ ಕೂಡಲೇ ಕೈಬಿಡಲು ಅವರು ಇಂದು ಹೊರಡಿಸಿರುವ ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.