ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟಾರೆ 3812 ಅರ್ಜಿಗಳನ್ನು ಸ್ವೀಕರಿಸಲಾಗಿದೆ.
ಇಂದಿನ ಜನಸ್ಪಂದನಾ ಕಾರ್ಯಕ್ರಮಕ್ಕೆ ನಮ್ಮ ನಿರೀಕ್ಷೆಗೂ ಮೀರಿ ಜನ ಆಗಮಿಸಿ ತಮ್ಮ ಅಹವಾಲು ಸಲ್ಲಿಸಿದ್ದಾರೆ, ಸುಮಾರು 950 ಜನರಿಂದ ನಾನೇ ನೇರವಾಗಿ ಅಹವಾಲು ಸ್ವೀಕರಿಸಿದ್ದೇನೆ. ಕಾಲ ಮಿತಿಯೊಳಗೆ ಎಲ್ಲರ ಸಮಸ್ಯೆ ಬಗೆಹರಿಸಿ ನಮ್ಮ ಸರ್ಕಾರದ ಮೇಲೆ ಜನರಿಗಿರುವ ವಿಶ್ವಾಸವನ್ನು ಉಳಿಸಿಕೊಳ್ಳಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು.
— CM of Karnataka (@CMofKarnataka) November 27, 2023
ಮುಂದಿನ… pic.twitter.com/BnRJJgUd8V
ಇದರಲ್ಲಿ 2862 ಅರ್ಜಿಗಳನ್ನು ಈಗಾಗಲೇ ಐಪಿಜಿಆರ್ಎಸ್ ತಂತ್ರಾಂಶದಲ್ಲಿ ನೋಂದಣಿ ಮಾಡಲಾಗಿದ್ದು, 950 ಅರ್ಜಿಗಳನ್ನು ನೇರವಾಗಿ ಸ್ವೀಕರಿಸಲಾಗಿದೆ. ಇವುಗಳನ್ನೂ ಸಹ ಐಪಿಜಿಆರ್ಎಸ್ ತಂತ್ರಾಂಶದಲ್ಲಿ ನೋಂದಾಯಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕಾಗಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.