Home ಬೆಂಗಳೂರು ನಗರ ಕೊರೋನಾ ಅಬ್ಬರ ತಡೆಗೆ ಕರ್ನಾಟಕದಲ್ಲಿ ಮೇ 10 ರಿಂದ 24ರ ವರೆಗೆ ಕಟ್ಟುನಿಟ್ಟಾದ ನಿಯಮಗಳು ಜಾರಿ

ಕೊರೋನಾ ಅಬ್ಬರ ತಡೆಗೆ ಕರ್ನಾಟಕದಲ್ಲಿ ಮೇ 10 ರಿಂದ 24ರ ವರೆಗೆ ಕಟ್ಟುನಿಟ್ಟಾದ ನಿಯಮಗಳು ಜಾರಿ

33
0

ರೈಲು, ವಿಮಾನ ಪ್ರಯಾಣವನ್ನು ಅನುಮತಿಸಲಾಗಿದೆ, ಆದರೆ ವಾಹನ ಮತ್ತು ಅಂತರ-ಜಿಲ್ಲಾ ಸಂಚಾರವನ್ನು ನಿರ್ಬಂಧಿಸಲಾಗಿದೆ

ಬ್ಯಾಂಕುಗಳು ಮತ್ತು ಅಗತ್ಯ ಸರ್ಕಾರಿ ಸೇವೆಗಳು ತೆರೆದಿರುತ್ತವೆ; ಬೆಳಿಗ್ಗೆ 6 ರಿಂದ 10 ರವರೆಗೆ ದಿನಸಿ ಅಂಗಡಿಗಳು, ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಹಾಪ್‌ಕಾಮ್ಸ್ ತೆರೆದಿರುತ್ತವೆ

ಬೆಂಗಳೂರು:

ರಾಜ್ಯದಲ್ಲಿ ಜನತಾ ಕರ್ಫ್ಯೂ ಹೊರತಾಗಿಯೂ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮೇ 10 ರಿಂದ 24ರ ವರೆಗೆ ರಾಜ್ಯಾದ್ಯಂತ ಕಟ್ಟುನಿಟ್ಟಾದ ನಿಯಮಗಳು ಜಾರಿ ಮಾಡಿದ್ದಾರೆ.

ಈ ಕುರಿತಂತೆ ಇಂದು ಸಂಜೆ ಸುದ್ದಿಗೋಷ್ಠಿಯಲ್ಲಿ ಅಧಿಕತವಾಗಿ ಘೋಷಣೆ ಮಾಡಿದ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಮೇ 10ರ ಬೆಳಿಗ್ಗೆ 6.30ರಿಂದ 24ರ ಬೆಳಿಗ್ಗೆ 6.30ರವರೆಗೆ ಕಟ್ಟುನಿಟ್ಟಾದ ನಿಯಮಗಳು ಘೋಷಿಸಿದ್ದಾರೆ.

ಬೆಳಿಗ್ಗೆ 6ರಿಂದ10ರವರೆಗೆ ಮಾತ್ರ ತಿನಿಸುಗಳು, ಮಾಂಸದ ಅಂಗಡಿಗಳು ಮತ್ತು ತರಕಾರಿ ಅಂಗಡಿಗಳು ಕಾರ್ಯನಿರ್ವಹಿಸಬಹುದು. ಅದೂ ಹೊಟೆಲ್ ಗಳಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶವಿರುತ್ತದೆ. ಬೆಳಗ್ಗೆ 10 ಗಂಟೆಯ ಬಳಿಕ ಯಾರೂ ಕೂಡ ರಸ್ತೆಗಳಲ್ಲಿ ಓಡಾಡುವಂತಿಲ್ಲ, ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅಗತ್ಯ ವಸ್ತುಗಳ ಸರಬರಾಜಿಗೆ ಗೂಡ್ಸ್ ವಾಹನಗಳ ಓಡಾಟ ಇರಲಿದ್ದು, ಆನ್‌ಲೈನ್ ಡೆಲಿವರಿ ಸರ್ವಿಸ್‌ಗೂ ಅವಕಾಶ ನೀಡಲಾಗಿದೆ ಎಂದು ಹೇಳಿದರು.

Screenshot 224
Screenshot 225
Screenshot 226
Screenshot 227
Screenshot 228
Screenshot 229

LEAVE A REPLY

Please enter your comment!
Please enter your name here