Home ಬೆಂಗಳೂರು ನಗರ ಕರ್ನಾಟಕ ಕರ್ಫ್ಯೂ ಇನ್ನೂ 14 ದಿನ, ಜೂನ್ 7 ರವರೆಗೆ ಕಠಿಣ ನಿರ್ಬಂಧ ಜಾರಿ

ಕರ್ನಾಟಕ ಕರ್ಫ್ಯೂ ಇನ್ನೂ 14 ದಿನ, ಜೂನ್ 7 ರವರೆಗೆ ಕಠಿಣ ನಿರ್ಬಂಧ ಜಾರಿ

55
0

ಬೆಂಗಳೂರು:

ನಿರೀಕ್ಷೆಯಂತೆ, ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಶುಕ್ರವಾರ ರಾಜ್ಯವ್ಯಾಪಿ ಕರ್ಫ್ಯೂ ವಿಸ್ತರಣೆಯನ್ನು ಘೋಷಿಸಿದ್ದಾರೆ – ಲಾಕ್ ಡೌನ್ – ಅದರಂತೆ ಮೇ 24 ರಿಂದ ಜೂನ್ 7ರ ವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ ಬಳಿಕ ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಬೆಳಿಗ್ಗೆ 6 ರಿಂದ 10 ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು. ಆದರೆ 10 ರ ಬಳಿಕವೂ ಜನರು ಓಡಾಡುತ್ತಿದ್ದಾರೆ. ಹೀಗಾಗಿ ಬೆ.6 ರಿಂದ 9.45ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತಿದ್ದು, ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದಿನ ಮಾರ್ಗಸೂಚಿ ಕ್ರಮಗಳನ್ನು ಮುಂದುವರೆಸಲಾಗಿದೆ.

Screenshot 275
Screenshot 276

LEAVE A REPLY

Please enter your comment!
Please enter your name here