Home ರಾಜಕೀಯ ಸಿಎಂ ಬಸವರಾಜ್ ಬೊಮ್ಮಾಯಿ ರಾಜಿನಾಮೆ ಪತ್ರ ಅಂಗೀಕರಿಸಿದ ರಾಜ್ಯಪಾಲರು

ಸಿಎಂ ಬಸವರಾಜ್ ಬೊಮ್ಮಾಯಿ ರಾಜಿನಾಮೆ ಪತ್ರ ಅಂಗೀಕರಿಸಿದ ರಾಜ್ಯಪಾಲರು

135
0
Karnataka Governor accepts Chief Minister Basavaraj Bommai's resignation

ಬೆಂಗಳೂರು:

ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡು ಆಡಳಿತಾರೂಢ ಬಿಜೆಪಿ ಸೋಲು ಕಂಡಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಇಂದು ರಾತ್ರಿ ರಾಜಭವನಕ್ಕೆ ಭೇಟಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ರಾಜೀನಾಮೆ ಪತ್ರವನ್ನು ಸಿಎಂ ಬೊಮ್ಮಾಯಿ ತಲುಪಿಸಿದ್ದಾರೆ.

ಈ ಸಂದರ್ಭದಲ್ಲಿ ಶಾಸಕರಾದ ಬೈರತಿ ಬಸವರಾಜ್, ಸುರೇಶ್ ಕುಮಾರ್ , ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹಾಜರಿದ್ದರು.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 65 ಸ್ಥಾನಗಳನ್ನು ಗೆದ್ದಿದ್ದರೆ, ಅಧಿಕಾರಕ್ಕೇರಿರುವ ಕಾಂಗ್ರೆಸ್ 136 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ, ಜೆಡಿಎಸ್ 19 ಸ್ಥಾನಗಳಲ್ಲಿ ಗೆದ್ದಿದೆ.

LEAVE A REPLY

Please enter your comment!
Please enter your name here