Home ಬೆಂಗಳೂರು ನಗರ ಬೆಂಗಳೂರಲ್ಲಿ ಪ್ರತಿಭಟನೆ, ಮೆರವಣಿಗೆಗೆ ಹೈಕೋರ್ಟ್ ನಿರ್ಬಂಧ

ಬೆಂಗಳೂರಲ್ಲಿ ಪ್ರತಿಭಟನೆ, ಮೆರವಣಿಗೆಗೆ ಹೈಕೋರ್ಟ್ ನಿರ್ಬಂಧ

28
0
Karnataka High Court

ಬೆಂಗಳೂರು:

ಕಾಂಗ್ರೆಸ್ ಪಾದಯಾತ್ರೆಯಿಂದಾಗಿ ಟ್ರಾಫಿಕ್ ಜಾಮ್ ಹಿನ್ನೆಲೆ ಬೆಂಗಳೂರಲ್ಲಿ ಪ್ರತಿಭಟನೆ, ಮೆರವಣಿಗೆಗೆ ಹೈಕೋರ್ಟ್ ನಿರ್ಬಂಧ ವಿಧಿಸಿದೆ. ಫ್ರೀಡಂಪಾರ್ಕ್​ನ ನಿಗದಿತ ಜಾಗದಲ್ಲಿ ಮಾತ್ರ ಅವಕಾಶ ನೀಡಬೇಕು ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿದೆ.

ಟ್ರಾಫಿಕ್ ಜಾಮ್​ನಿಂದ ಬೆಂಗಳೂರಿನ ಜನರಿಗೆ ಸಮಸ್ಯೆಯಾಗುತ್ತಿದೆ. ಇಂತಹ ಮೆರವಣಿಗೆಗಳ‌‌ ಮೇಲೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಕ್ರಮಕ್ಕೆ ಸೂಚನೆ ನೀಡಲಾಗಿದೆ.

ಮೇಕೆದಾಟು ಪಾದಯಾತ್ರೆಯಿಂದಾಗಿ ಟ್ರಾಫಿಕ್ ಜಾಮ್ ಆಗಿ, ನ್ಯಾಯಮೂರ್ತಿಗಳಿಗೂ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ. ಈ ಬಗ್ಗೆ ವಿಚಾರಣೆ ವೇಳೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿದ್ದು, ಬೆಂಗಳೂರಿನಲ್ಲಿ ಮೆರವಣಿಗೆ, ಧರಣಿ, ರ್ಯಾಲಿಗೆ ಬ್ರೇಕ್‌ ಹಾಕುವಂತೆ ಕರ್ನಾಟಕದ ಸರ್ಕಾರಕ್ಕೆ ಕೋರ್ಟ್ ಖಡಕ್‌ ಸೂಚನೆ ಕೊಟ್ಟಿದೆ.

LEAVE A REPLY

Please enter your comment!
Please enter your name here