Home ರಾಜಕೀಯ ವಿಧಾನಮಂಡಲದ ಅಧಿವೇಶನವು ಜುಲೈ 21ರವರೆಗೆ ಮುಂದುವರಿಕೆ – ಸಭಾಧ್ಯಕ್ಷ ಯು.ಟಿ.ಖಾದರ್

ವಿಧಾನಮಂಡಲದ ಅಧಿವೇಶನವು ಜುಲೈ 21ರವರೆಗೆ ಮುಂದುವರಿಕೆ – ಸಭಾಧ್ಯಕ್ಷ ಯು.ಟಿ.ಖಾದರ್

104
0
Karnataka Legislature session will continue till July 21 - Speaker UT Khader
Karnataka Legislature session will continue till July 21 - Speaker UT Khader

ಬೆಂಗಳೂರು:

ವಿಮಾನ ಮಂಡಲದ ಅಧಿವೇಶನವು 21ನೇ ಜುಲೈ 2023ರವರೆಗೆ ಮುಂದುವರಿಸಲಾಗುವುದು ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ತಿಳಿಸಿದರು.

ಇಂದು ವಿಧಾನಸಭೆಯ ಕಲಾಪದ ಮಧ್ಯೆ ಸಭಾಧ್ಯಕ್ಷರು ಜುಲೈ 5 ರಂದು ಈಗಾಗಲೆ ಸ್ವೀಕರಿಸಿದ ವಿಧೇಯಕಗಳ ಮಂಡನೆ ಮಂಡಿಸುವುದು, ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಚರ್ಚೆ, ಜುಲೈ 6ರಂದು ಬೆಳಿಗ್ಗೆ ಮುಖ್ಯಮಂತ್ರಿಗಳು ರಾಜ್ಯಪಾಲರ ವಂದನಾ ನಿರ್ಣಯದ ಚರ್ಚೆಗೆ ಉತ್ತರ ನೀಡಲಿದ್ದಾರೆ. ಜುಲೈ 7ರಂದು ಮುಖ್ಯಮಂತ್ರಿಗಳು 2023-24ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಜುಲೈ 10ರಿಂದ 19ರವೆಗೆ ಇಲಾಖಾವಾರು ಬೇಡಿಕೆಗಳ ಕುರಿತು ಚರ್ಚೆ ನಡೆಸಲಾಗುವುದು. ಜುಲೈ 20ರಂದು ಹಣಕಾಸು ವಿಧೇಯಕಗಳ ಅಂಗೀಕಾರವಿರಲಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here