
Karnataka Lokayukta Raids | Karnataka Lokayukta attacks at 11 locations in Bengaluru
ಬೆಂಗಳೂರು:
ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆಯೇ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಭ್ರಷ್ಟ ಅಧಿಕಾರಿಗಳ ನಿವಾಸಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಪೊಲೀಸರು ಇಂದು ಮುಂಜಾನೆ ಭ್ರಷ್ಟ ಸರ್ಕಾರಿ ಅಧಿಕಾರಿಗಳ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಚಿತ್ರದುರ್ಗ, ಕಲಬುರಗಿ, ರಾಯಚೂರು, ಹಾಸನ, ಬೀದರ್, ದೇವದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭ್ರಷ್ಟ ಅಧಿಕಾರಿಗಳ ನಿವಾಸಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ 11 ಕಡೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಹಿಂದೆ ಕೆಆರ್ ಪುರಂನಲ್ಲಿ ಎಆರ್ ಒ ಚಂದ್ರಪ್ಪ ಬಿರಜ್ಜನವರ್ ಈಗ ಹೆಗ್ಗನಹಳ್ಳಿ ವಾರ್ಡ್ ನಲ್ಲಿ ಪೋಸ್ಟ್ ಮಾಡಲಾಗಿದೆ — ಮನೆ ಮೇಲೆ ಅಧಿಕಾರಿಗಳು ದಾಳಿ
ನಡೆಸಿದ್ದು, ಎಆರ್ ಒಗೆ ಸಂಬಂಧಿಸಿದ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಈ ಹಿಂದೆ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಎಆರ್ ಒ ಚಂದ್ರಪ್ಪ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದು, ಅದರ ಮುಂದುವರಿದ ಭಾಗವಾಗಿ ಲೋಕಾಯುಕ್ತರು ದಾಳಿ ನಡೆಸಿ ಹುಡುಕಾಟ ನಡೆಸಿದ್ದರು.