Home ಮೈಸೂರು ಸಚಿವ ಎಸ್.ಟಿ.ಸೋಮಶೇಖರ್ ರಿಂದ ಡೋಲು ಬಡಿತ, ವೀರಗಾಸೆ ಕುಣಿತ

ಸಚಿವ ಎಸ್.ಟಿ.ಸೋಮಶೇಖರ್ ರಿಂದ ಡೋಲು ಬಡಿತ, ವೀರಗಾಸೆ ಕುಣಿತ

57
0
Karnataka Minister ST Somashekhar actively participates in Mysore Dasara Procession

ಮೈಸೂರು:

ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಅರಮನೆಗೆ ಬರಮಾಡಿಕೊಳ್ಳುವ ಸಂದರ್ಭದಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಡೋಲು ಬಡಿದು, ಕಂಸಾಳೆಯಾಡಿ, ಕಲಾವಿದರೊಂದಿಗೆ ವೀರಗಾಸೆ ಕುಣಿತ ಮಾಡಿದರು.

ಆರಮನೆ ಆವರಣದಲ್ಲಿ ನೆರೆದಿದ್ದ ಕಲಾತಂಡಗಳ ಜೊತೆ ಕಲಾವಿದರಂತೆಯೇ ಡೋಲು ಬಾರಿಸಿದರು. ವೀರಗಾಸೆ ಕುಣಿತ ಮಾಡುವ ಕಲಾವಿದರನ್ನು ಹುರಿದುಂಬಿಸುವುದರ ಜೊತೆಗೆ ತಮ್ಮಲ್ಲಿನ ಜಾನಪದ ಕಲೆಯನ್ನು ಕೂಡ ಪ್ರದರ್ಶಿಸಿದರು.

Karnataka Minister ST Somashekhar actively participates in Mysore Dasara Procession

ಪೂಜಾ ಕುಣಿತ, ಗೊಂಬೆ ಕುಣಿತ ನೋಡಿದ ಸಚಿವರು ಅವರೊಂದಿಗೆ ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದರು. ಸಚಿವರ ಕುಣಿತ, ಡೋಲು ಬಡಿತವನ್ನು ಕಂಡ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಕೂಡ ತಮಟೆ ಬಾರಿಸಿದರು. ಸಚಿವರೊಂದಿಗೆ ಮೂಡಾ ಅಧ್ಯಕ್ಷ ರಾಜೀವ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಗಳ ಅಧ್ಯಕ್ಷ ಅಪ್ಪಣ್ಣ ಸೇರಿದಂತೆ ಹಲವು ಮುಖಂಡರು ಹೆಜ್ಜೆ ಹಾಕಿದರು.

ಇದೇ ವೇಳೆ ಗ್ರಾಮೀಣ ಕಲಾ ತಂಡಗಳನ್ನು ವೀಕ್ಷಿಸಿ, ಅವರ ಕಲೆಯನ್ನು ಪ್ರೋತ್ಸಾಹಿಸಿದರು. ಬೆಳಗ್ಗೆ 10 ಗಂಟೆಯಿಂದಲೇ ಅರಮನೆ ಆವರಣದಲ್ಲಿ ಸಂಭ್ರಮ ಮನೆ ಮಾಡಿತ್ತು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಲಾವಿದರಿಗೆ ಪ್ರೋತ್ಸಾಹ ನೀಡಬೇಕೆಂದು ಕರೆತರಲಾಗಿದೆ. ಅವರೊಂದಿಗೆ ಹೆಜ್ಜೆ ಹಾಕಲು ಸಾಧ್ಯವಿಲ್ಲ ಆದರೆ ಅವರನ್ನು ಪ್ರೋತ್ಸಾಹಿಸಿ ಹುರಿದುಂಬಿಸಲು 1%ನಷ್ಟು ಕುಣಿತ ಮಾಡಲಾಯಿತು ಎಂದರು.

ಚಿನ್ನದ ಅಂಬಾರಿಯಲ್ಲಿ ಮೆರವಣಿಗೆಯಲ್ಲಿ ಸಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಈ ಮೊದಲು ಆಟೋ, ಮೊಬೈಲ್ ವ್ಯಾನ್ ನಲ್ಲಿ ಕರೆತರಲಾಗುತ್ತಿತ್ತು. ಆದರೆ ಈ ರೀತಿ ದೇವಿಯನ್ನು ಕರೆತರುವುದು ಸರಿಯಲ್ಲ ಎಂದು ಇದೇ ಮೊದಲ ಬಾರಿಗೆ ಉತ್ಸವ ಮೂರ್ತಿಯನ್ನು ಅರಮನೆಗೆ ಮೆರವಣಿಗೆಯಲ್ಲಿ ಕರೆತರುತ್ತಿರುವುದು ಇದೇ ಮೊದಲು ಎಂದು ಹೇಳಿದರು.

ಜಂಬೂ ಸವಾರಿ ವೀಕ್ಷಣೆಗೆ 500 ಜನರಿಗೆ ಅವಕಾಶ ಕಲ್ಪಿಸಲಾಗಿದೆ. ಮುಖ್ಯ ನ್ಯಾಯಮೂರ್ತಿಗಳು, ಮುಖ್ಯಮಂತ್ರಿ ಸೇರಿದಂತೆ ಗಣ್ಯಾತಿಗಣ್ಯರು ಜಂಬೂ ಸವಾರಿ ವೀಕ್ಷಣೆ ಮಾಡಲಿದ್ದಾರೆ ಎಂದರು.

ಈ ಬಾರಿ 6 ಸ್ತಬ್ಧ ಚಿತ್ರಗಳು ಸಾಗಲಿವೆ. ಜಂಬೂ ಸವಾರಿಯನ್ನು ದೂರದರ್ಶನ ನೇರಪ್ರಸಾರ ಮಾಡಲಿದೆ. ಇದರ ಜೊತೆಗೆ ಫೇಸ್ ಬುಕ್, ಯೂಟ್ಯೂಬ್, ವರ್ಚ್ಯುವಲ್ ಮೂಲಕ ಕೂಡ ಸಾರ್ವಜನಿಕರು ವೀಕ್ಷಿಸಬಹುದಾಗಿದೆ ಎಂದು ಹೇಳಿದರು.

ಕೋವಿಡ್ ನಿಯಮ ಉಲ್ಲಂಘನೆ ಮಾಡದೆ ಸರಳ, ಸಾಂಪ್ರದಾಯಿಕವಾಗಿ ದಸರಾ ಆಚರಣೆ ಮಾಡಲಾಗಿದೆ. ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಲಿ, ನಾಡು ಸಮೃದ್ಧವಾಗಲಿ ಎಂದು ವಿಜಯದಶಮಿಯ ಈ ದಿನದಂದು ತಾಯಿ ಚಾಮುಂಡೇಶ್ವರಿಯನ್ನು ಪ್ರಾರ್ಥಿಸುತ್ತೇನೆ ಎಂದರು.

ಇಲ್ಲಿ ಓದಿ: ಚಾಮುಂಡಿ ಬೆಟ್ಟದಲ್ಲಿ ಶ್ರೀಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ

ಇಲ್ಲಿ ಓದಿ: ವಿದ್ಯುತ್ ದೀಪಾಲಂಕಾರವನ್ನು ಒಂಬತ್ತು ದಿನಗಳವರೆಗೆ ವಿಸ್ತರಣೆ- ಸಿ.ಎಂ

LEAVE A REPLY

Please enter your comment!
Please enter your name here