Home ಆರೋಗ್ಯ Covid-19: ಸಾವಿನ ಲೆಕ್ಕ ಮುಚ್ಚಿಡುತ್ತಿಲ್ಲ

Covid-19: ಸಾವಿನ ಲೆಕ್ಕ ಮುಚ್ಚಿಡುತ್ತಿಲ್ಲ

22
0

ಬೆಂಗಳೂರು:

ಸರಕಾರವು ಕೋವಿಡ್‌ ಸಾವಿನ ಲೆಕ್ಕವನ್ನು ಮುಚ್ಚಿಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿರುವ ಅರೋಪ ಅಸತ್ಯದಿಂದ ಕೂಡಿದೆ. ಪ್ರತಿ ಸೋಂಕಿತನ ಬಗ್ಗೆಯೂ ಮಾಹಿತಿ ಇದೆ ಎಂದು ಕೋವಿಡ್‌ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.

ಯಾರಾದರೂ ಸಾವನ್ನಪ್ಪಿದರೆ ಆ ಮಾಹಿತಿಯೂ ವಿವಿಧ ಹಂತಗಳಲ್ಲಿ  ದಾಖಲಾಗುತ್ತಿದೆ. ಇದೆಲ್ಲವನ್ನು ಬಹಳ ವ್ಯವಸ್ಥಿತವಾಗಿ ಮಾಡಲಾಗುತ್ತಿದ್ದು, ಸಿದ್ದರಾಮಯ್ಯ ಅವರು ಮಾಡಿರುವ ಆರೋಪದಲ್ಲಿ ಹುರಳಿಲ್ಲ. ಜನರಲ್ಲಿ ಗೊಂದಲ ಉಂಟು ಮಾಡುವುದು ಬೇಡ ಎಂದು ಅಶ್ವತ್ಥನಾರಾಯಣ ಹೇಳಿದರು.

ರಾಜ್ಯದಲ್ಲಿ ಮಾತ್ರವಲ್ಲ ದೇಶದಲ್ಲೂ ಲಸಿಕೆ ಅಭಾವ ಇದೆ ಎನ್ನುವುದು ನಿಜ. ಆದರೆ, ಸರಕಾರ ಉತ್ಪಾದಕರಿಂದ ಲಸಿಕೆ ಪಡೆದು ಜನರಿಗೆ ನೀಡಲು ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ. ಹಂತ ಹಂತವಾಗಿ ಲಭ್ಯವಾಗುತ್ತಿರುವ ಲಸಿಕೆಯನ್ನು ಆಗಿಂದಾಗ್ಗೆ ಕೊಡಲಾಗುತ್ತಿದೆ. ಆದ್ಯತೆಯ ಮೇರೆಗೆ ಯಾರಿಗೆ ಕೋಡಬೇಕೋ ಅವರಿಗೆ ಕೊಡಲಾಗುತ್ತಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

LEAVE A REPLY

Please enter your comment!
Please enter your name here