Home ಬೆಳಗಾವಿ ನಾಗನೂರ ರುದ್ರಾಕ್ಷಿಮಠಕ್ಕೆ ಮಾಜಿ ಗೃಹ ಸಚಿವ ಎಂ.ಬಿ ಪಾಟೀಲ ಬೇಟಿ

ನಾಗನೂರ ರುದ್ರಾಕ್ಷಿಮಠಕ್ಕೆ ಮಾಜಿ ಗೃಹ ಸಚಿವ ಎಂ.ಬಿ ಪಾಟೀಲ ಬೇಟಿ

59
0

ಬೆಳಗಾವಿ:

ಶುಕ್ರವಾರ ಸದಾಶಿವ ನಗರದ ನಾಗನೂರ ರುದ್ರಾಕ್ಷಿಮಠಕ್ಕೆ ಬೇಟಿ ನೀಡಿ ಲಿಂಗೈಕ್ಯ ಶಿವಬಸವ ಸ್ವಾಮಿಗಳ, ಪ್ರಭು ಸ್ವಾಮಿಗಳ ಗದ್ದುಗೆಗೆ ನಮಸ್ಕರಿಸಿ ಮಾದ್ಯಮಗಳೊಂದಿಗೆ ಮಾತನಾಡಿ ಲಿಂಗೈಕ್ಯ ಫ.ಗು ಹಳಕಟ್ಟಿಯವರು ತಾವೇ ಪ್ರಕಟಿಸಿದ ಶಿವಾನುಭವ ಪತ್ರಿಕೆಯನ್ನು ಶೇಖರಿಸುವ ಕಾರ್ಯ ನಾಗನೂರ ರುದ್ರಾಕ್ಷಿಮಠ ಮಾಡಿದೆ. ಅದರ ಮರು ಮುದ್ರಣಕ್ಕೆ ನಾವು ಈಗಾಗಲೇ ಮುಖ್ಯಮಂತ್ರಿಗಳನ್ನು ಬೇಟಿ ಮಾಡಿ ಮಾತುಕತೆ ನಡೆಸಲಾಗಿದೆ. ಹಾಗೂ ಬಸವಣ್ಣನವರ ಮತ್ತು ಬಸವಾದಿ ಶರಣರ ವಚನಗಳ ಸಮಗ್ರ ಮಾಹಿತಿಯನ್ನು ಒದಗಿಸುವಂತಹ ಅಂತರಾಷ್ಟ್ರೀಯ ಮಟ್ಟದಲ್ಲಿ ವಚನ ಸಾಹಿತ್ಯದ ಗ್ರಂಥಾಲಯ ನಿರ್ಮಿಸುವ ಉದ್ದೇಶವನ್ನು ಹೊಂದಲಾಗಿದೆ. ಈ ಎಲ್ಲ ವಿಚಾರಗಳನ್ನು ಪೂಜ್ಯರೊಂದಿಗೆ ಚರ್ಚಿಸಲು ಆಗಿಮಿಸಲಾಗಿದೆ ಎಂದು ಮಾಜಿ ಗೃಹ ಸಚಿವ, ಲಿಂಗಾಯತ ನಾಯಕ ಡಾ. ಎಂ.ಬಿ ಪಾಟೀಲ ತಿಳಿಸಿದರು.

ಗದಗ ಪೂಜ್ಯ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ಪೂಜ್ಯ ಡಾ ಅಲ್ಲಮಪ್ರಭು ಮಹಾಸ್ವಾಮಿಗಳಿಗೆ ಸತ್ಕರಿಸಿ ಆಶೀರ್ವಾದ ಪಡೆದರು.

ಬೆಳಗಾವಿ ಜಿಲ್ಲೆಯ ಲಿಂಗಾಯತ ಸಮಾಜದ ಮುಂಖಂಡರು ಸತ್ಕಾರಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಚಿಕ್ಕೊಡಿ ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಕಾಂಗ್ರೆಸ್ ಜಿಲ್ಲಾದಕ್ಷ ವಿನಯ ನಾವಲಗಟ್ಟಿ, ಅಥಣಿ ಮುಖಂಡ ಧರೇಪ್ಪ ಠಕ್ಕಣ್ಣವರ, ಬಾಬಾಸಾಹೇಬ ಪಾಟೀಲ, ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ, ಬಸವಸೇನಾ ಅಧ್ಯಕ್ಷ ಶಂಕರ ಗುಡಸ, ಮಹಾಂತೇಶ ಮತ್ತಿಕೊಪ್ಪ, ಆನಂದ ಗಡದೇವರಮಠ, ರಾಜಿ ಶೇಟ್, ಮತ್ತಿತ್ತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here