ಬೆಂಗಳೂರು;- ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ವರ್ಗಾವಣೆ ದಂಧೆ ಶುರುವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಕರ್ನಾಟಕದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ತಮಿಳುನಾಡಿಗೆ ನೀರಿನ ಭಾಗ್ಯ, ಪಂಚರಾಜ್ಯಗಳಿಗೆ ಹಣದ ಭಾಗ್ಯ, ಕರ್ನಾಟಕದ ಜನತೆಗೆ ಕತ್ತಲ ಭಾಗ್ಯ ಒದಗಿಸುತ್ತಿದೆ ಎಂದರು.
ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ವರ್ಗಾವಣೆ ದಂಧೆ ನಡೆಯುತ್ತಿದೆ. ವರ್ಗಾವಣೆಗೆ ರೇಟ್ ನಿಗದಿ ಮಾಡಿದ್ದಾರೆ. ಇದರಿಂದ ಆರಂಭವಾದ ಭ್ರಷ್ಟಾಚಾರವು ಬಿಬಿಎಂಪಿ ಗುತ್ತಿಗೆದಾರರ ಹಣ ಬಿಡುಗಡೆಗೆ ಕಮಿಷನ್ ಪಡೆಯುವ ಮೂಲಕ ಮುಂದುವರೆದಿದೆ. ದಸರಾ ಕಲಾವಿದರಿಂದ ಹಣ ಕೇಳಿದ ಲಜ್ಜೆಗೇಡಿತನದ ಸರ್ಕಾರ ಇದು ಎಂದರು.
ಪಂಚರಾಜ್ಯಗಳಿಗೆ ಹಣದ ಹೊಳೆ ಹರಿಸುತ್ತಿದ್ದಾರೆ. ಗುತ್ತಿಗೆದಾರರ ಬಳಿ ಸಿಕ್ಕಿದ ಹಣದ ಬಗ್ಗೆ ಇಡಿ ತನಿಖೆ ನಡೆಸಬೇಕು. ಸರ್ಕಾರ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ ಅವರು, ಕೇವಲ 4 ತಿಂಗಳ ಕಾಂಗ್ರೆಸ್ ಆಡಳಿತಾವಧಿಯಲ್ಲಿ 251 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದು ಕಡೆಯಲ್ಲಿ ಕರೆಂಟಿಲ್ಲ, ರೈತರಿಗೆ ಪರಿಹಾರ ಕೊಡುತ್ತಿಲ್ಲ, ಸಾಲ ಮಾಡಿದ ರೈತರು ಬರ, ವಿದ್ಯುತ್ ಕೊರತೆಯಿಂದ ಕಷ್ಟದಲ್ಲಿದ್ದಾರೆ ಎಂದು ಹೇಳಿದರು.
The post Kateel: ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ವರ್ಗಾವಣೆ ದಂಧೆ ಶುರು – ಕಟೀಲ್ appeared first on Ain Live News.