Keregodu Flag Controversy: BJP Protests in Bengaluru, Many Arrested| ಕೆರೆಗೋಡು ಧ್ವಜ ವಿವಾದ : ಬೆಂಗಳೂರಿನಲ್ಲಿ ಬಿಜೆಪಿಯಿಂದ ಪ್ರತಿಭಟನೆ, ಹಲವರು ಬಂಧನ
ಬೆಂಗಳೂರು:
ಮಂಡ್ಯ ಜಿಲ್ಲೆ ಕೆರೆಗೋಡಿನಲ್ಲಿ ಕೇಸರಿ ಧ್ವಜವನ್ನು (Keregodu Flag) ಇಳಿಸಿರುವುದನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ವತಿಯಿಂದ ಇಂದು ಬೃಹತ್ ಪ್ರತಿಭಟನೆ ನಡೆಯಿತು. ಇದೇ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ಜೈ ಶ್ರೀರಾಮ್, ಜೈಜೈ ಶ್ರೀರಾಮ್, ಹನುಮಾನ್ ಕೀ ಜೈ, ಹಿಂದೂ ವಿರೋಧಿ ಸರಕಾರಕ್ಕೆ ಧಿಕ್ಕಾರ ಮೊದಲಾದ ಘೋಷಣೆಗಳನ್ನು ಕೂಗಲಾಯಿತು.



ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ. ರಾಮಮೂರ್ತಿ, ವಿಧಾನ ಪರಿಷತ್ತಿನ ಸದಸ್ಯೆ ಡಾ. ತೇಜಸ್ವಿನಿ ಗೌಡ, ಜನಪ್ರತಿನಿಧಿಗಳು, ಮಾಜಿ ಶಾಸಕರು, ನಗರ ಪಾಲಿಕೆ ಮಾಜಿ ಸದಸ್ಯರು, ಮುಖಂಡರು, ಕಾರ್ಯಕರ್ತರು ಇದರಲ್ಲಿ ಭಾಗವಹಿಸಿದ್ದರು.
