ಕೊಪ್ಪಳ:
ಕೊಪ್ಪಳದ ಹಿರಿಯ ಪತ್ರಕರ್ತ ವೀರಪ್ಪ ಗೋರಂಟ್ಲಿ (75) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಪತ್ನಿ, ಇಬ್ಬರು ಮಕ್ಕಳು, ಬಂಧು ಬಳಗವನ್ನು ಅಗಲಿದ್ದಾರೆ.
ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ವೀರಪ್ಪ, ಲಂಕೇಶ್ ಪತ್ರಿಕೆ, ಸುದ್ದಿ ಮೂಲ ಪತ್ರಿಕೆ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ಜನಪರ ಚಳುವಳಿಗಳಲ್ಲಿ ತೊಡಗಿಸಿಕೊಂಡಿದ್ದರು.
ಸಂತಾಪ: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಜೊತೆಗೆ ಅವಿನಾಭಾವ ಸಂಬಂಧ ಹೊಂದಿದ್ದ ವೀರಪ್ಪ ಗೋರಂಟ್ಲಿ ನಿಧನ, ಒಬ್ಬ ಕ್ರಿಯಾಶೀಲ ಪತ್ರಕರ್ತರನ್ನು ಕಳೆದುಕೊಂಡಂತಾಗಿದೆ. ಗೋರಂಟ್ಲಿ ಆತ್ಮಕ್ಕೆ ಶಾಂತಿ ಸಿಗಲಿ. ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಪ್ರಾರ್ಥಿಸಿದ್ದಾರೆ.