ಬೆಂಗಳೂರು;- ಜೆಡಿಎಸ್ಗೆ ವಿರೋಧ ಪಕ್ಷದ ನಾಯಕನ ಜವಾಬ್ದಾರಿಯ ಕುರಿತು ಹರಿದಾಡುತ್ತಿರುವ ಸುದ್ದಿಗೆ ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಕುಮಾರಸ್ವಾಮಿಯವರು ವಿರೋಧ ಪಕ್ಷದ ನಾಯಕರಾಗುತ್ತಿರುವುದು ನನಗೆ ಗೊತ್ತಿಲ್ಲ. ನಿಮಗ್ಯಾರು ಹೇಳಿದ್ದಾರೊ ಅವರನ್ನೇ ಕೇಳಿ ಎಂದು ಮುಗುಳ್ನಕ್ಕರು.
ಇನ್ನೂ ಸದಾನಂದ ಗೌಡರು ಪಕ್ಷದ ವಿರುದ್ಧ ಮಾತನಾಡಿಲ್ಲ. ತಮ್ಮ ಅಭಿಪ್ರಾಯ ಹೇಳುವಾಗ ನಮ್ಮನ್ನೆಲ್ಲಾ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು ಎಂದಿದ್ದಾರೆ. ಅವರು ನಮ್ಮ ಬಿಜೆಪಿಯ ಹಿರಿಯ ನಾಯಕರು. ಬಿಜೆಪಿ ರಾಜ್ಯಾಧ್ಯಕ್ಷ, ಮುಖ್ಯಮಂತ್ರಿ ಹುದ್ದೆಯನ್ನು ನಿಭಾಯಿಸಿ ಸಂಸದರಾಗಿ, ಕೇಂದ್ರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರ ಹೇಳಿಕೆಗೆ ತಪ್ಪು ಕಲ್ಪಿಸುವುದು ಬೇಡ ಎಂದರು.
The post Kota Srinivas Pujari; ಜೆಡಿಎಸ್ಗೆ ವಿರೋಧ ಪಕ್ಷದ ನಾಯಕನ ಜವಾಬ್ದಾರಿ – ಕೋಟ ಶ್ರೀನಿವಾಸ್ ಪೂಜಾರಿ ಹೇಳಿದಿಷ್ಟು! appeared first on Ain Live News.