Home ರಾಜಕೀಯ ಸಿಬಿಐನೇ ಪರವಾಗಿಲ್ಲ, ಲೋಕಾಯುಕ್ತ ಏನೇನೋ ಪ್ರಶ್ನೆ ಕೇಳಿ ಹಿಂಸೆ ಕೊಡ್ತಿದ್ದಾರೆ: ಡಿಕೆ ಶಿವಕುಮಾರ

ಸಿಬಿಐನೇ ಪರವಾಗಿಲ್ಲ, ಲೋಕಾಯುಕ್ತ ಏನೇನೋ ಪ್ರಶ್ನೆ ಕೇಳಿ ಹಿಂಸೆ ಕೊಡ್ತಿದ್ದಾರೆ: ಡಿಕೆ ಶಿವಕುಮಾರ

38
0
CBI doesn't care, Lokayukta asks some questions and tortures them: DK Shivakumar

ಸಿಬಿಐ, ಲೋಕಾಯುಕ್ತದಿಂದ ಸ್ನೇಹಿತರು, ಕುಟುಂಬಸ್ಥರಿಗೆ ಕಿರುಕುಳ

ಬೆಂಗಳೂರು, ಆ.22: ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐನಿಂದ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿತ್ತು. ಆದರೆ ಸಿಬಿಐನವರು ತನಿಖೆಯನ್ನು ನಿಲ್ಲಿಸದೆ ಮುಂದುವರೆಸಿದ್ದಾರೆ. ನೂರಕ್ಕೂ ಹೆಚ್ಚು ನನ್ನ ಸ್ನೇಹಿತರು, ಕುಟುಂಬಸ್ಥರಿಗೆ ತುಂಬಾ ಕಿರುಕುಳ ನೀಡುತ್ತಿದ್ದಾರೆ. ಇದೇ ಕೆಲಸವನ್ನು ಲೋಕಾಯುಕ್ತ ಕೂಡ ಮುಂದುವರೆಸಿದೆ, ಅವರಿಂದಲೂ ಕಿರುಕುಳ ಆಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಲೋಕಾಯುಕ್ತ ವಿಚಾರಣೆ ನಂತರ ಲೋಕಾಯುಕ್ತ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು “ಲೋಕಾಯುಕ್ತ ಕಳೆದ ಆರು ತಿಂಗಳಿನಿಂದ ತನಿಖೆ ಮಾಡುತ್ತಿದೆ. ಎರಡು ಗಂಟೆಗಳಿಗೂ ಹೆಚ್ಚು ಕಾಲ ನನ್ನನ್ನು ವಿಚಾರಣೆ ಮಾಡಿದರು. ಇವರಿಗಿಂತ ಸಿಬಿಐನವರೇ ಪರವಾಗಿಲ್ಲ. ಲೋಕಾಯುಕ್ತದವರು ವಿಚಿತ್ರ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಸಿಬಿಐನವರೇ ಇನ್ನು ನನಗೆ ಪ್ರಶ್ನೆಗಳನ್ನೇ ಕೇಳಿಲ್ಲ, ಒಂದು ದಿನವೂ ವಿಚಾರಣೆಗೆ ಕರೆಯಲಿಲ್ಲ. ಆದರೆ ಲೋಕಾಯುಕ್ತದವರು ಸಹ ಹಿಂಸೆ ಕೊಡುತ್ತಿದ್ದಾರೆ” ಎಂದರು.

“ಲೋಕಾಯುಕ್ತದ ಪ್ರಶ್ನೆಗಳಿಗೆ ಉತ್ತರಗಳನ್ನು ಕೊಟ್ಟಿದ್ದೇನೆ. ಒಂದಷ್ಟು ವಿಚಾರಗಳಲ್ಲಿ ಸ್ಪಷ್ಟನೆ ಪಡೆದುಕೊಳ್ಳಲು ಪ್ರಶ್ನೆಗಳನ್ನು ಕೇಳಿದ್ದು,ಇದಕ್ಕೆ ಸಂಬಂಧಿಸಿದಂತೆ ನನ್ನ ಬಳಿ ಇರುವ ಪೂರಕವಾದ ದಾಖಲೆಗಳನ್ನು ಸಲ್ಲಿಸುತ್ತೇನೆ” ಎಂದು ಅವರು ಹೇಳಿದರು.

“ಬುಧವಾರ (ಆ.21) ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದರು. ಆಲಮಟ್ಟಿ ಅಣೆಕಟ್ಟೆಗೆ ಬಾಗಿನ ಅರ್ಪಿಸುವ ಕಾರ್ಯಕ್ರವಿದ್ದ ಕಾರಣಕ್ಕೆ ಇಂದು (ಗುರುವಾರ) ಹಾಜರಾಗುತ್ತೇನೆ ಎಂದು ಮನವಿ ಮಾಡಿಕೊಂಡಿದ್ದೆ” ಎಂದು ತಿಳಿಸಿದರು.

ಯಾವ ದಾಖಲೆಗಳನ್ನು ಕೇಳಿದ್ದಾರೆ ಎಂದು ಪ್ರಶ್ನಿಸಿದಾಗ “ನಾನು ಅದನ್ನೆಲ್ಲಾ ಹೇಳಲು ಆಗುವುದಿಲ್ಲ” ಎಂದರು.

ಮತ್ತೊಮ್ಮೆ ವಿಚಾರಣೆಗೆ ಹಾಜರಾಗಬೇಕೆ ಎಂದು ಕೇಳಿದಾಗ “ಗೊತ್ತಿಲ್ಲ, ನಾನು ಕೊಟ್ಟಿರುವ ಉತ್ತರ, ದಾಖಲೆಗಳನ್ನು ಪರಿಶೀಲಿಸಿ ಮತ್ತೊಮ್ಮೆ ಕರೆಯುತ್ತಾರೆ” ಎಂದರು.

ಸಿಬಿಐ ಇಂದ ಪ್ರಕರಣವನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿತ್ತು ಪ್ರಾಸಿಕ್ಯೂಷನ್ ಅನುಮತಿ ವಾಪಸ್ಸು ಪಡೆದುಕೊಂಡಿದ್ರು ಅನುಮತಿ ವಾಪಸ್ಸಾತಿಯನ್ನು ಹೈಕೋರ್ಟ್ ಅಲ್ಲಿ ಪ್ರಶ್ನೆ ಮಾಡಲಾಗಿದೆ ಹೀಗಾಗಿ ಲೋಕಾಯುಕ್ತ ಪೊಲೀಸರಿಂದ ವಿಚಾರಣೆ

2013ರ ಏಪ್ರಿಲ್ 1ರಿಂದ 2018ರ ಏ. 30ರವರೆಗೆ ಡಿಕೆ ಶಿವಕುಮಾರ್ ಅವರು ಗಳಿಸಿರುವ ಆಸ್ತಿ ವಿವರವನ್ನು ನೀಡುವಂತೆ ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ. ಅಸಲಿಗೆ, ಇದೇ ಪ್ರಕರಣದಲ್ಲಿ ಸಿಬಿಐ, ಡಿಕೆಶಿ ವಿರುದ್ಧ ದಾಖಲಿಸಿದಾಗ ಡಿಕೆ ಶಿವಕುಮಾರ್ ಅವರು ಇದೇ ಅವಧಿಯಲ್ಲಿ ತಾವು ಗಳಿಸಿರುವ ಆಸ್ತಿ ವಿವರವನ್ನು ಸಿಬಿಐಗೆ ಸಲ್ಲಿಸಿದ್ದರು. ಅದೇ ದಾಖಲೆಗಳ ಬೇರೊಂದು ಪ್ರತಿಯನ್ನು ತಮಗೆ ಸಲ್ಲಿಸುವಂತೆ ಲೋಕಾಯುಕ್ತ ನ್ಯಾಯಾಲಯ ಈಗ ಡಿಕೆಶಿ ಅವರಿಗೆ ಸೂಚಿಸಿದೆ.

ಇದೇ ವರ್ಷದ ಫೆಬ್ರವರಿಯಲ್ಲಿ ಡಿಕೆಶಿಯವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿದ್ದ ಈ ಹಿಂದಿನ ರಾಜ್ಯ ಸರ್ಕಾರದ ನಿರ್ಧಾರವನ್ನು ಈಗಿನ ಸಿದ್ದರಾಮಯ್ಯನವರ ಸರ್ಕಾರ ಹಿಂಪಡೆದಿತ್ತು. ಸಿಬಿಐನಿಂದ ಹಿಂಪಡೆಯಲಾದ ಪ್ರಕರಣವನ್ನು ಲೋಕಾಯುಕ್ತಕ್ಕೆ ವಹಿಸಲಾಗಿತ್ತು. ಅದಾದ ನಂತರ, ಲೋಕಾಯುಕ್ತ ಸಂಸ್ಥೆಯು ಡಿಕೆಶಿ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ಆ ಹಿನ್ನೆಲೆಯಲ್ಲಿ ಈಗ ದಾಖಲೆಗಳನ್ನು ಸಲ್ಲಿಸುವಂತೆ ನೋಟಿಸ್ ನೀಡಲಾಗಿದೆ.

LEAVE A REPLY

Please enter your comment!
Please enter your name here