Home ಕರ್ನಾಟಕ Madikeri: ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ; ನೆಲಕ್ಕುರುಳಿದ ಜನರಲ್ ತಿಮ್ಮಯ್ಯ ಪ್ರತಿಮೆ

Madikeri: ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ; ನೆಲಕ್ಕುರುಳಿದ ಜನರಲ್ ತಿಮ್ಮಯ್ಯ ಪ್ರತಿಮೆ

16
0
Madikeri: KSRTC bus hits traffic island General Thimmaiah statue Collapsed
Madikeri: KSRTC bus hits traffic island General Thimmaiah statue Collapsed
Advertisement
bengaluru

ಮಡಿಕೇರಿ:

ಕೆಎಸ್ ಆರ್ ಟಿ ಸಿ ಬಸ್ ವೊಂದು ಸೋಮವಾರ ಬೆಳಿಗ್ಗೆ ಡಿಕ್ಕಿ ಹೊಡೆದು ನಗರದ ಟೋಲ್ ಗೇಟ್ ನಲ್ಲಿರುವ ಜನರಲ್ ತಿಮ್ಮಯ್ಯ ಪ್ರತಿಮೆ ನೆಲಕ್ಕುರುಳಿದೆ.

ಬಸ್ ಡಿಪೋದಿಂದ ಬಸ್ ನಿಲ್ದಾಣಕ್ಕೆ ಬರುತ್ತಿದ್ದ ಈ ಬಸ್ ನಲ್ಲಿ ಚಾಲಕ ಮತ್ತು ನಿರ್ವಾಹಕ ಇಬ್ಬರೇ ಇದ್ದರು. ಪಿಕಪ್ ವಾಹನವೊಂದು ಅಡ್ಡಲಾಗಿ ಬಂದಿದ್ದರಿಂದ ಬಸ್ ಅನ್ನು ಪಕ್ಕಕ್ಕೆ ತಿರುಗಿಸಿದಾಗ ಅಪಘಾತ ಸಂಭವಿಸಿದೆ.

WhatsApp Image 2023 08 21 at 1.12.11 PM
WhatsApp Image 2023 08 21 at 1.12.10 PM 1

ಅದೃಷ್ಟವಶಾತ್ ಬಸ್‌ನಲ್ಲಿ ಪ್ರಯಾಣಿಕರಿಲ್ಲದ್ದರಿಂದ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕ ಹಾಗೂ ಕಾರ್ಯನಿರ್ವಾಹಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು, ಬಸ್ ಚಾಲಕ ಕೊಟ್ರೇಶ್‌ನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದು, ಬಸ್ ಅನ್ನು ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

bengaluru bengaluru


bengaluru

LEAVE A REPLY

Please enter your comment!
Please enter your name here