ಮೈಸೂರು: ಮಹಿಷ ದಸರಾ ವಿರುದ್ಧ ಚಲೋ ಚಾಮುಂಡಿ ಅಭಿಯಾನ ವಿಚಾರವಾಗಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧವೇ ಮೈಸೂರು ನಗರ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಈಶ್ವರ್ ಟೀಕೆ ಮಾಡಿದ್ದಾರೆ. ಸಂಸದ ಪ್ರತಾಪ್ ಸಿಂಹ ಸಂವಿಧಾನ ವಿರೋಧಿ ನಡೆ ಅನುಸರಿಸುತ್ತಿದ್ದಾರೆ.
ಮಹಿಷಾ ಪೂಜೆ ಮಾಡಬೇಡ ಅಂತ ಹೇಳಲು ನೀನ್ಯಾರು?: ಪ್ರತಾಪ್ ಸಿಂಹ ವಿರುದ್ಧ ಲಕ್ಷ್ಮಣ್ ವಾಗ್ದಾಳಿ
ಮಹಿಷ ದಸರಾ ಬಗ್ಗೆ ಇಲ್ಲಸಲ್ಲದ ರಾಜಕೀಯ ಮಾಡುತ್ತಿದ್ದಾರೆ. ಧಾರ್ಮಿಕ ಆಚರಣೆಗೆ ಸಂವಿಧಾನದಲ್ಲಿ ಮುಕ್ತ ಅವಕಾಶವಿದೆ. ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಚಲೋ ಚಾಮುಂಡಿ ವಿಚಾರವಾಗಿ ನಮ್ಮ ಬಳಿ ಚರ್ಚೆ ನಡೆಸಿಲ್ಲ. ಪ್ರತಾಪ್ ಸಿಂಹ, ಶಾಸಕ ಶ್ರೀವತ್ಸ ಸ್ವಯಂ ನಿರ್ಧಾರಕೈಗೊಂಡಿದ್ದಾರೆ ಎಂದಿದ್ದಾರೆ.
The post Mahisha Dasara: ಮಹಿಷ ದಸರಾ ಬಗ್ಗೆ ಇಲ್ಲಸಲ್ಲದ ರಾಜಕೀಯ ಮಾಡುತ್ತಿದ್ದಾರೆ: ಈಶ್ವರ್ appeared first on Ain Live News.