Home ಬೆಂಗಳೂರು ನಗರ ‘ಕೊರೋನಾದಿಂದಾದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರ ಮಾಡಿದ ಯುವಕರ ಸೇವೆ ಅನುಕರಣೀಯ’

‘ಕೊರೋನಾದಿಂದಾದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರ ಮಾಡಿದ ಯುವಕರ ಸೇವೆ ಅನುಕರಣೀಯ’

320
0
Advertisement
bengaluru

ಬಿಜೆಪಿ ಕಾರ್ಯಕರ್ತರು ಗಿರೀಶ್, ಲಿಂಗರಾಜು, ಉಮೇಶ್ ಹಾಗೂ ಪ್ರವೀಣ್ ರವರಿಗೆ ಕೃತಜ್ಞತೆ ಸಲ್ಲಿಸಿದ ಸಚಿವ ಸುರೇಶ್ ಕುಮಾರ್

ಬೆಂಗಳೂರು:

ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಯೊಬ್ಬರ ಶವವನ್ನು ತಮ್ಮ‌ ಹಿತ ಲೆಕ್ಕಿಸದೇ ಅಂತ್ಯಸಂಸ್ಕಾರ ಮಾಡಿ ಮಾದರಿಯಾದ ರಾಜಾಜಿನಗರದ ಯುವಕರ ಸೇವೆಯನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ದಾಖಲಿಸಿರುವ ಸಚಿವರು, ಕೊರೋನಾದಿಂದ ಮೃತಪಟ್ಟ ವ್ಯಕ್ತಿಯನ್ನು ಮುಟ್ಟಲು ಸಂಬಂಧಿಕರೇ ಹಿಂಜರಿಯುತ್ತಿದ್ದ  ಹಾಗೂ ಏನು ಮಾಡಬೇಕೆಂದು ತೋಚದೆ ಕಂಗಾಲಾಗಿ ಕುಳಿತಿದ್ದ ಸಂದರ್ಭದಲ್ಲಿ ಈ ಯುವಕರು  ಮುಂದೆ ನಿಂತು ಅಂತ್ಯ ಸಂಸ್ಕಾರ ನೆರವೇರಿಸಿ ಮಾದರಿಯಾಗಿದ್ದಾರೆಂದು ಹೇಳಿದ್ದಾರೆ. 

‘ ಕನಕಪುರ ರಸ್ತೆಯ ತಲಗಟ್ಟಪುರ ಹತ್ತಿರದ ಒಂದು ಹಳ್ಳಿಯಲ್ಲಿ ದಂಪತಿ ವಾಸವಾಗಿದ್ದರು. ಅದರಲ್ಲಿ ಗಂಡನಿಗೆ ಕೋವಿಡ್ ಬಂದು ತೀರಿ ಹೋಗಿದ್ದಾರೆ.. ಅಂತ್ಯಸಂಸ್ಕಾರ ಮಾಡಲು ಯಾರು ಇಲ್ಲ ಎಂಬ ಈ ಮಾಹಿತಿಯನ್ನು ನನ್ನ ಪತ್ರಕರ್ತ ಗೆಳೆಯರೊಬ್ಬರು ನನಗೆ ತಿಳಿಸಿದರು. ನಾನು ಚಾಮರಾಜನಗರ ಜಿಲ್ಲೆಯ ಪ್ರವಾಸದಲ್ಲಿದ್ದೆ. ತಕ್ಷಣವೇ ರಾಜಾಜಿನಗರದ ನಮ್ಮ ಯುವ ಗೆಳೆಯರಿಗೆ ಕರೆ ಮಾಡಿ ವಿಷಯ ತಿಳಿಸಿ ಅಗತ್ಯ ನೆರವು ನೀಡಲು ತಿಳಿಸಿದೆ. ನಮ್ಮ ಯುವಕರು ವಿಚಾರಿಸಿದಾಗ ಆ ವ್ಯಕ್ತಿಗೆ ಜ್ವರ ಬಂದ ಕಾರಣ ಸ್ಥಳೀಯ  ಆಸ್ಪತ್ರೆಗೆ ಕಳೆದ ವಾರ  ಹೋಗಿ ಪರೀಕ್ಷೆ ಮಾಡಿಸಿರುವ ವಿಚಾರ ತಿಳಿದುಬಂದಿದೆ.   ಅಲ್ಲಿ ಅವರಿಗೆ ಕೋವಿಡ್ ಪಾಸಿವಿಟ್ ಎಂದು ಗೊತ್ತಾಗಿದೆ. ಅವರು ನೇರವಾಗಿ ಮನೆಗೆ ಬಂದು ಕೋಣೆಯಲ್ಲಿ ಮೊಬೈಲ್ ಸ್ವಿಚ್ ಆಫ್ ಮಾಡಿ ಮಲಗಿದ್ದಾರೆ. ಮೊನ್ನೆ ಸಂಜೆ ಅವರ ಹೆಂಡತಿ ಕೋಣೆಗೆ ಹೋಗಿ ನೋಡಿದರೆ ಗಂಡ ಮರಣ ಹೊಂದಿರುವುದು ಗೊತ್ತಾಗಿದೆ. ಇದರಿಂದ ಹೆಂಡತಿಯು ಗಾಬರಿಯಾಗಿ  ಏನು ಮಾಡಬೇಕೆಂದು ತಿಳಿಯದೆ ದಿಗ್ಬ್ರಮೆಗೊಂಡಿದ್ದಾರೆ.  ನಂತರ ಅಕ್ಕ ಪಕ್ಕದ ಮನೆಯವರಿಗೆ ವಿಷಯ ತಿಳಿದು ಅವರು ಮೈಸೂರಿನಲ್ಲಿರುವ  ಗಂಡನ ಸಂಬಂಧಿಕರಿಗೆ  ಕರೆ ಮಾಡಿ ತಿಳಿಸಿದ್ದಾರೆ.  ಮೈಸೂರಿನಿಂದ ಕಾರಿನಲ್ಲಿ ಬಂದ  ಅವರು ಕೊರೋನಾ ಕಾರಣದಿಂದ  ಮನೆಯ ಒಳಗೆ ಹೋಗದೆ  ಹೊರಗಡೆ ಕಾರಿನಲ್ಲೇ ರಾತ್ರಿ ಕಳೆದಿದ್ದಾರೆ. ಒಂದು ಕಡೆ ಕೊಠಡಿಯಲ್ಲಿ ಮೃತ ವ್ಯಕ್ತಿ, ಮನೆಯ  ಹಾಲ್ ನಲ್ಲಿ ಹೆಂಡತಿ, ಹೊರಗಡೆ ಕಾರಿನಲ್ಲಿ ಸಂಬಂಧಿಕರು ಯಾರಿಗೂ ಮುಂದೆ ಏನು ಮಾಡಬೇಕೆಂದು ತಿಳಿದಿಲ್ಲದಂತಾದ ಸಂದರ್ಭದಲ್ಲಿ ನಮ್ಮ ಯುವ ಗೆಳೆಯರಾದ  ಗಿರೀಶ್, ಲಿಂಗರಾಜು, ಉಮೇಶ್ ಹಾಗೂ ಪ್ರವೀಣ್ ನೆರವಿಗೆ ಧಾವಿಸಿ ಸಹಾಯ ಹಸ್ತ ಚಾಚಿದ್ದಾರೆಂದು”  ಸುರೇಶ್ ಕುಮಾರ್ ತಿಳಿಸಿದ್ದಾರೆ.

bengaluru bengaluru

ತಕ್ಷಣವೇ  ಈ ಯುವಕರು ಸ್ಥಳೀಯ ಆರೋಗ್ಯಾಧಿಕಾರಿ ಅವರನ್ನು ಸಂಪರ್ಕಿಸಿ ಅವರಿಂದ ಡೆತ್ ಸರ್ಟಿಫಿಕೇಟ್ ಪಡೆದು ಕೆಂಗೇರಿಯ ಚಿತಗಾರದಲ್ಲಿ ಶವದ ಅಂತಿಮ ಕಾರ್ಯಕ್ಕೆ ವ್ಯವಸ್ಥೆ ಮಾಡಿ ಮುಗಿಸಿದ್ದಾರೆ.  ಅಲ್ಲಿ ಶವದ ಪರವಾಗಿ ಅವರ ಒಬ್ಬ ಸಂಬಂಧಿ ಬಿಟ್ಟು ಯಾರು ಸಹ ಇರಲಿಲ್ಲ. ಅವರು ಶವದ ಹತ್ತಿರವಿರಲಿ,ಅದರ ವಾಹನ ಹತ್ತಿರ ಬರಲೂ  ಹೆದರುತ್ತಿದ್ದರು. ನಮ್ಮ ಯುವ ಗೆಳೆಯರು ಮೃತದೇಹದ ಪೂಜಾ ಕಾರ್ಯವನ್ನೂ ಮುಗಿಸಿ   ಅಂತಿಮ ಸಂಸ್ಕಾರ ಮಾಡಿ ಬಂದರು ಎಂದು ಅವರು ತಿಳಿಸಿದ್ದಾರೆ.

ಧೈರ್ಯದಿಂದ, ಒಳ್ಳೆ ಮನಸ್ಸಿನಿಂದ, ಯಾವುದೇ ಫಲಾಪೇಕ್ಷೆ ಇಲ್ಲದೆ   ಮತ್ತು ತಮ್ಮ ವೈಯಕ್ತಿಕ ಹಿತವನ್ನೂ  ಲೆಕ್ಕಿಸದೇ ಆ ಕಾರ್ಯ ಮಾಡಿದ   ಗಿರೀಶ್, ಲಿಂಗರಾಜು, ಉಮೇಶ್ ಹಾಗೂ ಪ್ರವೀಣ್ ರವರಿಗೆ ಸುರೇಶ್ ಕುಮಾರ್ ಕೃತಜ್ಞತೆ ಸಲ್ಲಿಸಿ ಇಂತಹವರು ಇತರರಿಗೆ ಮಾದರಿಯಾಗಬೇಕೆಂದು ಶ್ಲಾಘಿಸಿದ್ದಾರೆ.


bengaluru

LEAVE A REPLY

Please enter your comment!
Please enter your name here