Home ಅಪರಾಧ ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ ಕೇಸ್: ನಾಲ್ವರು ಅರೆಸ್ಟ್

ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ ಕೇಸ್: ನಾಲ್ವರು ಅರೆಸ್ಟ್

25
0
After BJP's victory in Chikkaballapur, MLA Pradeep Eshwar's house was pelted with stones.

ಬೆಂಗಳೂರು: ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ ಕೇಸ್ ಗೆ ಸಂಬಧಪಟ್ಟಂತೆ ನಾಲ್ವರನ್ನು ಅರೆಸ್ಟ್ ಮಾಡಲಾಗಿದೆ. ಕೌಶಿಕ್, ಚಂದು, ಶ್ರೀನಾಥ್ ಹಾಗೂ ನಿತೀನ್ ಎಂಬುವರನ್ನು ಚಿಕ್ಕಬಳ್ಳಾಫುರ ನಗರ ಠಾಣೆ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮದ್ಯದ ಅಮಲಿನಲ್ಲಿ ಮನೆ ಮೇಲೆ ಕಲ್ಲು ಹೊಡೆದಿದ್ದಾಗಿ ತಿಳಿದುಬಂದಿದೆ.

ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಜೂನ್ 4ರ ರಾತ್ರಿ ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಪ್ರದೀಪ್ ಈಶ್ವರ್​ ನಿವಾಸಕ್ಕೆ ರಾತ್ರಿ ಕಲ್ಲು ಹೊಡೆದಿದ್ದರು. ಇದರಿಂದ ಮನೆ ಕಿಟಕಿ ಗಾಜು ಪುಡಿಪುಡಿಯಾಗಿತ್ತು. ಈ ಸಂಬಂಧ ಚಿಕ್ಕಬಳ್ಳಾಫುರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

LEAVE A REPLY

Please enter your comment!
Please enter your name here