Home Uncategorized MP Renukacharya: ಮೋಸ ಮಾಡಿದ ವಚನಭ್ರಷ್ಟರೊಂದಿಗೆ ಮೈತ್ರಿ ಎಷ್ಟು ಸರಿ?: ರೇಣುಕಾಚಾರ್ಯ

MP Renukacharya: ಮೋಸ ಮಾಡಿದ ವಚನಭ್ರಷ್ಟರೊಂದಿಗೆ ಮೈತ್ರಿ ಎಷ್ಟು ಸರಿ?: ರೇಣುಕಾಚಾರ್ಯ

0
0

ಚಿತ್ರದುರ್ಗ: ಬಿಜೆಪಿ, ಜೆಡಿಎಸ್ ಮೈತ್ರಿ (Alliance) ಕೇವಲ ರಾಷ್ಟ್ರೀಯ ನಾಯಕರ ಮಧ್ಯೆ ಚರ್ಚೆ ಆಗಿದೆ. ಆದರೆ ಕಾರ್ಯಕರ್ತರಲ್ಲಿ ಸಾಮರಸ್ಯ ಮೂಡದಿದ್ದರೆ ಎರಡು ಪಕ್ಷಗಳ ಮಧ್ಯೆ ಸಂಘರ್ಷವಾಗಲಿದೆ ಎಂದು ಮಾಜಿ ಸಚಿವ ಬಿಜೆಪಿ ಮುಖಂಡ ರೇಣುಕಾಚಾರ್ಯ (MP Renukacharya) ಭವಿಷ್ಯ ನುಡಿದಿದ್ದಾರೆ.

ಚಿತ್ರದುರ್ಗದ (Chitradurga) ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳೊಂದಿಗೆ ರೇಣುಕಾಚಾರ್ಯ ಮಾತನಾಡಿದರು. ನಿನ್ನೆಯಷ್ಟೇ ಸ್ವಪಕ್ಷಿಯರ ವಿರುದ್ಧ ಮಾಜಿ ಸಚಿವ ಸೋಮಣ್ಣ ಗುಡುಗಿದ್ದರು. ಇದರ ಬೆನ್ನಲ್ಲೆ ಬಿಜೆಪಿ ನಾಯಕರ ವಿರುದ್ಧ ಮತ್ತೋರ್ವ ಮಾಜಿ ಸಚಿವ ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆ ಅವರಲ್ಲಿರುವ ಅಸಮಾಧಾನವನ್ನು ಹೊರಹಾಕಿದ್ದಾರೆ.

Mahira Khan: 2ನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪಾಕಿಸ್ತಾನಿ ನಟಿ..!

ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಬಗ್ಗೆ ಕೇವಲ ರಾಷ್ಟ್ರೀಯ ನಾಯಕರ ಮಧ್ಯೆ ಚರ್ಚೆ ಆಗಿದೆ. ಮೈತ್ರಿ ಎಂದರೆ ಕಾರ್ಯಕರ್ತರ ಮಧ್ಯೆ ಸಾಮರಸ್ಯವಿರಬೇಕು. ಆದರೆ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಮಧ್ಯೆ ಸಂಘರ್ಷವಿದೆ. ಈ ಮೈತ್ರಿ ಬೂತ್ ಮಟ್ಟ ಹಾಗೂ ಗ್ರಾಮಾಂತರ ಮಟ್ಟದಲ್ಲಿ ಆಗಬೇಕು. ಈ ಹಿಂದೆ ಯಡಿಯೂರಪ್ಪ ಅವರಿಗೆ ಅಧಿಕಾರ ಬಿಟ್ಟುಕೊಡದೇ ಮೋಸ ಮಾಡಿದ ವಚನಭ್ರಷ್ಟರೊಂದಿಗೆ ಮೈತ್ರಿ ಎಷ್ಟು ಸರಿ ಎಂದು ಜನ ಕೇಳುತ್ತಿದ್ದಾರೆ ಎಂದರು.

The post MP Renukacharya: ಮೋಸ ಮಾಡಿದ ವಚನಭ್ರಷ್ಟರೊಂದಿಗೆ ಮೈತ್ರಿ ಎಷ್ಟು ಸರಿ?: ರೇಣುಕಾಚಾರ್ಯ appeared first on Ain Live News.

LEAVE A REPLY

Please enter your comment!
Please enter your name here