Home Uncategorized Muniratna; ನನ್ನ ಜನರಿಗಾಗಿ ಡಿಕೆಶಿ ಕಾಲು ಹಿಡಿಯಲು ನಾನು ಸಿದ್ಧ – ಮುನಿರತ್ನ

Muniratna; ನನ್ನ ಜನರಿಗಾಗಿ ಡಿಕೆಶಿ ಕಾಲು ಹಿಡಿಯಲು ನಾನು ಸಿದ್ಧ – ಮುನಿರತ್ನ

20
0

ಬೆಂಗಳೂರು;- ನನ್ನ ಕ್ಷೇತ್ರದ ಜನರಿಗಾಗಿ ಡಿಕೆಶಿ ಕಾಲು ಹಿಡಿಯಲು ನಾನು ಸಿದ್ಧ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು,ಅನುದಾನದ ಬಗ್ಗೆ ಮುಖ್ಯಮಂತ್ರಿ ಅವರನ್ನು ಕೇಳುವುದಿಲ್ಲ. ಬೆಂಗಳೂರು ಅಭಿವೃದ್ಧಿ ಸಚಿವರು ಡಿಕೆ ಶಿವಕುಮಾರ್. ಹೀಗಾಗಿ ನನಗೆ ಡಿಸಿಎಂ ಅವರಿಂದಲೇ ಅನುದಾನ ಬೇಕಿರುವುದು. ಬದಲಾವಣೆ ಅನುದಾನ ಕೊಡಿಸಬೇಕಿರುವುದು ಡಿಸಿಎಂ. ನಾನು ಸಿಎಂ ಹತ್ತಿರ ಹೋಗಲ್ಲ. ಡಿಸಿಎಂ ಹತ್ತಿರ ಹೋಗುತ್ತೇನೆ. ಅವರ ಕಾಲನ್ನೇ ನಾನು ಹಿಡಿಯುತ್ತೇನೆ ಎಂದರು.

ಇನ್ನೂ ವಿಪಕ್ಷ ನಾಯಕನ ಆಯ್ಕೆ ಮಾಡದ ವಿಚಾರವಾಗಿ ಮಾಜಿ ಸಿಎಂ ಸದಾನಂದ ಗೌಡರ ವಿರೋಧ ವಿಚಾರವಾಗಿ ಮಾತನಾಡಿದ ಮುನಿರತ್ನ, ಅವರ ಹೇಳಿಕೆಗೆ ನನ್ನ ವಿರೋಧ ಇದೆ. ಯಡಿಯೂರಪ್ಪ ಅವರನ್ನು ಕೆಳಗೆ ಇಳಿಸುವಾಗ ಅವರಿಗೆ ವಿರೋಧ ಇರಲಿಲ್ಲವಾ? ಆಗ ಯಾಕೆ ಪ್ರಶ್ನೆ ಮಾಡಲಿಲ್ಲ ಎಂದು ಪ್ರಶ್ನಿಸಿದರು. ಅಲ್ಲದೆ, 66 ಮಂದಿ ಬಿಜೆಪಿ ಶಾಸಕರು ವಿರೋಧ ಪಕ್ಷದ ನಾಯಕರೇ. ಎಲ್ಲರೂ ವಿಪಕ್ಷ ನಾಯಕರಾಗಿಯೇ ಕೆಲಸ ಮಾಡುತ್ತೇವೆ ಎಂದರು.

ಡಿಕೆ ಶಿವಕುಮಾರ್ ಅವರು ತಿಹಾರ್ ಜೈಲಿಗೆ ಹೋಗುತ್ತಾರೆಂಬ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಮುನಿರತ್ನ, ಕುಮಾರಸ್ವಾಮಿ ಅವರು ಮಾಜಿ ಸಿಎಂ, ಮಾಜಿ ಪ್ರಧಾನಿ ಮಗ. ಅವರಿಗೆ ಒಂದಷ್ಟು ವಿಚಾರ ಗೊತ್ತಿರಬೇಕು ಎಂದರು.

The post Muniratna; ನನ್ನ ಜನರಿಗಾಗಿ ಡಿಕೆಶಿ ಕಾಲು ಹಿಡಿಯಲು ನಾನು ಸಿದ್ಧ – ಮುನಿರತ್ನ appeared first on Ain Live News.

LEAVE A REPLY

Please enter your comment!
Please enter your name here