ಬೆಂಗಳೂರು;- ಡಿಕೆಶಿ ಕಾಲಿಗೆ ಬಿದ್ದಿದ್ದೇನೆ, ಅನುದಾನ ಕೊಡದಿದ್ದರೆ ಉಗ್ರ ಪ್ರತಿಭಟನೆ ಎಂದು ಶಾಸಕ ಮುನಿರತ್ನ ಹೇಳಿದ್ದಾರೆ.
ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮ ಮುಗಿಸಿ ಡಿ.ಕೆ. ಶಿವಕುಮಾರ್ ವಾಪಸ್ ಬರುತ್ತಿದ್ದಂತೆ ಅವರನ್ನು ಭೇಟಿಯಾದ ಶಾಸಕ ಮುನಿರತ್ನ ಅವರು ಕಾಲಿಗೆ ಬೀಳಲು ಮುಂದಾದರು. ಆಗ ಅವರನ್ನು ಹಿಡಿದು ತಡೆದ ಡಿ.ಕೆ. ಶಿವಕುಮಾರ್ ಹೆಗಲ ಮೇಲೆ ಕೈಹಾಕಿ ಮಾತನಾಡಿಸಿದರು. ಬಳಿಕ ಶಾಸಕ ಮುನಿರತ್ನ ಅವರಿಂದ ಮನವಿ ಸ್ವೀಕರಿಸಿ, ಈ ಬಗ್ಗೆ ಗಮನ ಹರಿಸುತ್ತೇನೆ ಎಂದು ಹೇಳಿದರು. ತಾವು ಈಗ ಮೈಸೂರಿಗೆ ಹೊರಡುತ್ತಿದ್ದು, ಅಲ್ಲಿಂದ ಬಂದ ಬಳಿಕ ಚರ್ಚೆ ಮಾಡುತ್ತೇನೆ ಎಂದು ಹೇಳಿ, ನಿರ್ಗಮಿಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಮುನಿರತ್ನ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಕಾಲಿಗೆ ಬಿದ್ದು ಕೇಳಿದ್ದೇನೆ. ಕರೆದು ಮಾತನಾಡುತ್ತೇನೆ ಎಂದು ಹೇಳಿದ್ದಾರೆ ಸಮಸ್ಯೆ ಬಗೆಹರಿಯದಿದ್ದರೆ ಮುಂದೆ ಉಗ್ರ ಹೋರಾಟವನ್ನು ಮಾಡಲಾಗುವುದು. ಮುಂದಿನ ಹೋರಾಟವನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ನಿರ್ಧಾರ ಮಾಡುತ್ತಾರೆ ಎಂದು ಹೇಳಿದರು.
ವಿಧಾನಸೌಧದ ಮುಂಭಾಗ ಪ್ರತಿಭಟನೆಯನ್ನು ಕೈಬಿಟ್ಟು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅರಮನೆ ಮೈದಾನದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ವೇದಿಕೆಯತ್ತ ಧಾವಿಸಿದರು. ಈ ವೇಳೆ ಮುನಿರತ್ನ ಅವರು ಅರಮನೆ ಮೈದಾನಕ್ಕೆ ಆಗಮಿಸುತ್ತಿದ್ದಂತೆ ಅವರನ್ನು ಪೊಲೀಸರು ತಡೆದರು. ಆಗ ಸಿಟ್ಟಿಗೆದ್ದ ಮುನಿರತ್ನ ಅವರು, ನಾನು ಶಾಸಕನಿದ್ದೇನೆ. ಇಲ್ಲೇನು ಪ್ರತಿಭಟನೆ ಮಾಡಲು ಬಂದಿಲ್ಲ. ಕ್ಷೇತ್ರದ ವಿಚಾರದ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಲು ಬಂದಿದ್ದೇನೆ ಎಂದು ಹೇಳಿದ್ದಾರೆ. ಆಗ ಪೊಲೀಸರು ಅವರನ್ನು ಒಳಗೆ ಬಿಟ್ಟರು.
The post Muniratna; DCM ಕಾಲಿಗೆ ಬಿದ್ದಿದ್ದೇನೆ, ಅನುದಾನ ಕೊಡದೆ ಹೋದಲ್ಲಿ ಉಗ್ರ ಹೋರಾಟ – ಮುನಿರತ್ನ appeared first on Ain Live News.