ಉಡುಪಿ: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಸಂಬಂಧಿತವಾಗಿ ಕುಟುಂಬದ ಯಜಮಾನ ಮತ್ತು ಅವರ ಮಗ ಸೇರಿದಂತೆ ಒಟ್ಟು ಮೂವರು ಸಾಕ್ಷಿಗಳ ಮುಖ್ಯ ವಿಚಾರಣೆ ಹಾಗೂ ಪಾಟಿ ಸವಾಲು ಶನಿವಾರ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಿತು.
ಮೃತ ಹಸಿನಾರನ ಪತಿ ನೂರ್ ಮುಹಮ್ಮದ್, ಅವರ ಮಗ ಅಸದ್ ಮತ್ತು ನೆರೆಮನೆಯ ಫರಾನ ನ್ಯಾಯಾಧೀಶ ಸಮಿವುಲ್ಲಾ ಅವರ ಮುಂದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ನೀಡಿದ್ದಾರೆ. ಸರಕಾರದ ಪರ ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವಾ ಸಾಕ್ಷಿಗಳ ಮುಖ್ಯ ವಿಚಾರಣೆಯನ್ನು ನಡೆಸಿದರು. ಮತ್ತಳ, ಆರೋಪಿಯಾಗಿರುವ ಪ್ರವೀಣ್ ಪ್ರದೀಪ್ ಚೌಗುಲೆ ಪರ ವಕೀಲ ರಾಜು ಪೂಜಾರಿ ಸಾಕ್ಷಿಗಳನ್ನು ಪಾಟಿ ಸವಾಲಿಗೆ ಒಳಪಡಿಸಿದರು. ಈ ವೇಳೆ ಆರೋಪಿಯನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ನಲ್ಲಿ ಹಾಜರುಪಡಿಸಲಾಯಿತು.
ಈವರೆಗೆ ಒಟ್ಟು 10 ಸಾಕ್ಷಿಗಳ ವಿಚಾರಣೆ ನಡೆಸಲಾಗಿದೆ. ಡಿಸೆಂಬರ್ 17 ಮತ್ತು 18 ರಂದು 10 ರಿಂದ 12 ಐತರ ಸಾಕ್ಷಿಗಳ ವಿಚಾರಣೆಗಾಗಿ ದಿನಾಂಕ ನಿಗದಿಪಡಿಸಲಾಗಿದೆ ಎಂದು ನ್ಯಾಯಾಧೀಶರು ಆದೇಶ ನೀಡಿದ್ದಾರೆ.
