Karnataka High Court slams officials for deliberately filing false chargesheets in election cases: ಚುನಾವಣಾ ಪ್ರಕರಣಗಳಲ್ಲಿ ಉದ್ದೇಶಪೂರ್ವಕವಾಗಿ ತಪ್ಪಾದ ಆರೋಪಪಟ್ಟಿ ಸಲ್ಲಿಸುವ ಅಧಿಕಾರಿಗಳ ನಡೆಗೆ ಹೈಕೋರ್ಟ್ ತೀವ್ರ ತರಾಟೆ
ಬೆಂಗಳೂರು:
ಹಿಜಾಬ್ ವಿವಾದ ಸೋಮವಾರ ಹೊಸ ತಿರುವು ಪಡೆದುಕೊಂಡಿದ್ದು, ಶಾಲಾ ಸಮವಸ್ತ್ರಕ್ಕೆ ಹೊಂದುವ ಬಣ್ಣದ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಮುಸ್ಲಿಂ ವಿದ್ಯಾರ್ಥಿಗಳು ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ.
ಶಾಂತಿ, ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಬಟ್ಟೆಯ ಬಳಕೆಯನ್ನು ನಿರ್ಬಂಧಿಸಿರುವ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ, ಹಿಜಾಬ್ ಪರವಾಗಿ ಅರ್ಜಿ ಸಲ್ಲಿಸಿರುವ ಹುಡುಗಿಯರು ಇಂದು ಕರ್ನಾಟಕ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದಾರೆ.
ಶಾಲಾ ಸಮವಸ್ತ್ರಕ್ಕೆ ಹೊಂದುವ ಬಣ್ಣದ ಹಿಜಾಬ್ ಧರಿಸಲು ಅವಕಾಶ ನೀಡಿ ಎಂದು ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಜೆ ಎಂ ಖಾಜಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಂ ದೀಕ್ಷಿತ್ ಅವರನ್ನೊಳಗೊಂಡ ಹೈಕೋರ್ಟ್ನ ಪೂರ್ಣ ಪೀಠಕ್ಕೆ ಬಾಲಕಿಯರು ಮನವಿ ಮಾಡಿದ್ದಾರೆ.
ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ಪರವಾಗಿ ವಾದ ಮಂಡಿಸಿದ ವಕೀಲ ದೇವದತ್ತ್ ಕಾಮತ್ ಅವರು, ‘ನಾನು ರಾಜ್ಯ ಸರ್ಕಾರದ ಆದೇಶವನ್ನು ಮಾತ್ರ ಪ್ರಶ್ನಿಸುತ್ತಿಲ್ಲ. ಸಮವಸ್ತ್ರಕ್ಕೆ ಹೊಂದುವ ಬಣ್ಣದ ಸ್ಕಾರ್ಫ್ ಧರಿಸಲು ಅವಕಾಶ ನೀಡುವಂತೆ ಸಕಾರಾತ್ಮಕ ಆದೇಶವನ್ನು ಕೇಳುತ್ತೇನೆ ಎಂದು ಪೀಠಕ್ಕೆ ತಿಳಿಸಿದರು.
ಕೇಂದ್ರೀಯ ಶಾಲೆಗಳು ಮುಸ್ಲಿಂ ಹುಡುಗಿಯರು ಶಾಲಾ ಸಮವಸ್ತ್ರದ ಬಣ್ಣದ ಶಿರಸ್ತ್ರಾಣವನ್ನು ಧರಿಸಲು ಅನುಮತಿ ನೀಡುತ್ತವೆ ಮತ್ತು ಅದೇ ರೀತಿ ಇಲ್ಲಿಯೂ ಮಾಡಬಹುದು ಎಂದು ಕಾಮತ್ ಪ್ರತಿಪಾದಿಸಿದರು.
