Karnataka High Court slams officials for deliberately filing false chargesheets in election cases: ಚುನಾವಣಾ ಪ್ರಕರಣಗಳಲ್ಲಿ ಉದ್ದೇಶಪೂರ್ವಕವಾಗಿ ತಪ್ಪಾದ ಆರೋಪಪಟ್ಟಿ ಸಲ್ಲಿಸುವ ಅಧಿಕಾರಿಗಳ ನಡೆಗೆ ಹೈಕೋರ್ಟ್ ತೀವ್ರ ತರಾಟೆ
ಬೆಂಗಳೂರು:
ಗೂಂಡಾ ಕಾಯಿದೆ ಅಡಿ ಬಂಧಿತ ಆರೋಪಿಗೆ ಆತನಿಗೆ ತಿಳಿದಿರುವ ಭಾಷೆಯಲ್ಲಿ ದಾಖಲೆಗಳನ್ನು ಒದಗಿಸದ ಹಿನ್ನೆಲೆಯಲ್ಲಿ ಹೈಕೋರ್ಟ್ ಇತ್ತೀಚೆಗೆ ಆತನ ಬಿಡುಗಡೆಗೆ ಆದೇಶ ಮಾಡಿದೆ.
ಬಂಧಿತ ವ್ಯಕ್ತಿ ರೋಷನ್ ಝಮೀರ್ ಅವರ ತಂದೆ ಮೊಹಮ್ಮದ್ ಶಫೀವುಲ್ಲಾ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠವು ಪುರಸ್ಕರಿಸಿದೆ.
ಆರೋಪಿ ಅರೇಬಿಕ್ ಶಾಲೆಯಲ್ಲಿ ಕೇವಲ 2ನೇ ತರಗತಿವರೆಗೆ ಓದಿದ್ದಾನೆ. ಆತ ಮೊದಲ ಭಾಷೆಯಾಗಿ ಅರೇಬಿಕ್ ಅಥವಾ ಉರ್ದು ಮಾತ್ರ ಓದಿದ್ದಾನೆ. ಆತನಿಗೆ ಇತರೆ ಭಾಷೆಗಳು ತಿಳಿದಿಲ್ಲ.
ಆದರೆ, ಭಾರತೀಯ ಸಂವಿಧಾನದ 22(5)ನೇ ವಿಧಿ ಪ್ರಕಾರ ಅಧಿಕಾರಿಗಳು ಯಾವುದೇ ಬಂಧಿತ ಆರೋಪಿಗೆ ಆತನಿಗೆ ತಿಳಿದಿರುವ ಭಾಷೆಯಲ್ಲಿ ದಾಖಲೆಗಳನ್ನು ಒದಗಿಸುವುದು ಬದ್ಧ ಕರ್ತವ್ಯ. ಆದರೆ, ಈ ಪ್ರಕರಣದಲ್ಲಿ ವಿಫಲರಾಗಿದ್ದಾರೆ ಎಂದು ಹೇಳಿದೆ.
ಆರೋಪಿಯನ್ನು ಏಕೆ ಬಂಧಿಸಲಾಗಿದೆ ಮತ್ತು ಪ್ರಕರಣದ ವಿವರಗಳನ್ನು ಆತನಿಗೆ ತಿಳಿದಿರುವ ಭಾಷೆಗೆ ಅನುವಾದಿಸಿ ಆತನಿಗೆ ನೀಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಹೀಗಾಗಿ, ಆತನ ಬಿಡುಗಡೆಗೆ ಆದೇಶಿಸಲಾಗುತ್ತಿದೆ ಎಂದು ಪೀಠ ವಿವರಿಸಿದೆ.
ಅರ್ಜಿದಾರರ ಪರ ವಾದಿಸಿದ ವಕೀಲರು, ಆರೋಪಿ ಕೇವಲ 2ನೇ ತರಗತಿವರೆಗೆ ಉರ್ದು ಮಾಧ್ಯಮದಲ್ಲಿ ಓದಿದ್ದಾನೆ. ಆದರೆ, ಅಧಿಕಾರಿಗಳು ಆತನಿಗೆ ಇಂಗ್ಲಿಷ್ ಮತ್ತು ಕನ್ನಡ ಭಾಷೆಯಲ್ಲಿದ್ದ ದಾಖಲೆಗಳನ್ನು ಮಾತ್ರ ಒದಗಿಸಿದ್ದಾರೆ. ಇದು ಸಂವಿಧಾನದ 22(5)ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ವಾದಿಸಿದ್ದರು.
ಆರೋಪಿಗೆ ತಿಳಿದಿರುವ ಭಾಷೆಯಲ್ಲಿ ದಾಖಲೆ ಒದಗಿಸದ ಕಾರಣ ಆತನಿಗೆ ತನ್ನನ್ನು ಏಕೆ ಬಂಧಿಸಲಾಗಿದೆ ಎಂಬ ವಿವರಗಳನ್ನು ತಿಳಿದುಕೊಳ್ಳಲಾಗಿಲ್ಲ, ಜೊತೆಗೆ ಗೂಂಡಾ ಕಾಯಿದೆ ಸೆಕ್ಷನ್ 8ರಡಿ ಮನವಿ ಸಲ್ಲಿಸಲು ಸಾಧ್ಯವಾಗಿಲ್ಲ. ಹೀಗಾಗಿ ಬಿಡುಗಡೆಗೆ ಆದೇಶ ಮಾಡಬೇಕು ಎಂದು ಕೋರಿದ್ದರು.
ಪ್ರಕರಣವೇನು?: ಆರೋಪಿ ರೋಷನ್ ಝಮೀರ್ 2013ರಿಂದ ಕಳ್ಳತನ, ದರೋಡೆ ಸೇರಿದಂತೆ ಹಲವು ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದೆ. ಹೀಗಾಗಿ, ಆತನ ವಿರುದ್ಧ 2023ರ ಎ.27ರಂದು ಪೊಲೀಸರು ಗೂಂಡಾ ಕಾಯಿದೆ ಅಡಿ ಪ್ರಕರಣ ದಾಖಲಿಸಿದ್ದರು. ಅದೇ ದಿನ ಆತನನ್ನು ಬಂಧಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದಿದ್ದರು. ನಂತರ ಸರಕಾರ ಆತನ ಬಂಧನ ಆದೇಶವನ್ನು ಕಾಯಂಗೊಳಿಸಿತ್ತು.
