ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಸಿ: ಯಡಿಯೂರಪ್ಪ
ಬೆಂಗಳೂರು:
ಗ್ರಾಮಗಳ ಅಭಿವೃದ್ಧಿಯಿಂದಲೇ ನಾಡಿನ ಅಭಿವೃದ್ಧಿ ಸಾಧ್ಯ. ಗ್ರಾಮ ರಾಜ್ಯದ ಮೂಲಕ ರಾಮ ರಾಜ್ಯ ಸ್ಥಾಪಿಸುವುದು ನಮ್ಮ ಗುರಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಎಲ್ಲಾ ಜಿಲ್ಲಾಡಳಿತಗಳು ತಕ್ಷಣವೇ ಕಾರ್ಯಪ್ರವೃತ್ತವಾಗಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
![ಗ್ರಾಮ ರಾಜ್ಯದ ಮೂಲಕ ರಾಮ ರಾಜ್ಯ ಸ್ಥಾಪಿಸುವುದು ನಮ್ಮ ಗುರಿ 1 WhatsApp Image 2021 01 20 at 11.28.52](https://kannada.thebengalurulive.com/wp-content/uploads/2021/01/WhatsApp-Image-2021-01-20-at-11.28.52.jpeg)
ವಿಧಾನಸೌಧದಲ್ಲಿ ಡಿಸಿಗಳು, ಜಿಲ್ಲಾ ಪಂಚಾಯತ್ ಸಿಇಓಗಳ ಜೊತೆಗಿನ ಸಭೆಯಲ್ಲಿ ಪ್ರಾರಂಭಿಕ ಭಾಷಣ ಮಾಡಿದ ಅವರು, ಕೊವೀಡ್ ನಂತರ ಮೊದಲ ಬಾರಿಗೆ ನಿಮ್ಮೊಂದಿಗೆ ಸಭೆ ನಡೆಸುತ್ತಿದ್ದೇನೆ. ಜಿಲ್ಲಾಡಳಿತ ಸದಾ ಗ್ರಾಮ ಮುಖಿ ಆಗಿರಬೇಕು. ಗ್ರಾಮ ರಾಜ್ಯದ ಮೂಲಕ ರಾಮ ರಾಜ್ಯ ಸ್ಥಾಪಿಸುವುದು ನಮ್ಮ ಗುರಿ. ಗ್ರಾಮ, ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ಸಮಸ್ಯೆ ಇತ್ಯರ್ಥ ವಾಗಬೇಕು. ಹೀಗಿದ್ದಲ್ಲಿ ರಾಜಧಾನಿಗೆ ಜನರು ಬರುವುದು ಕಡಿಮೆ ಆಗುತ್ತದೆ. ತಳ ಮಟ್ಟದ ಆಡಳಿತ ಯಂತ್ರ ಕ್ರಿಯಾಶೀಲವಾಗಬೇಕು. ಇದನ್ನು ನೋಡಿಕೊಳ್ಳುವ ಜವಾಬ್ದಾರಿ ಡಿಸಿಗಳದ್ದು ಎಂದರು.
ಕಳೆದ 10 ತಿಂಗಳಿಂದ ಬರ, ಪ್ರವಾಹ, ಕೋವಿಡ್ ನಂತಹ ಸಮಸ್ಯೆ ಎದುರಿಸಿದ್ದೀರಿ. ಆತ್ಮ ನಿರ್ಭರ್ ಭಾರತ ನಿರ್ಮಾಣ ಮಾಡಬೇಕೆಂಬ ಪ್ರಧಾನಿ ನರೇಂದ್ರ ಮೋದಿ ಅವರ ಕರೆಯಂತೆ ನಾವು ಕಾರ್ಯ ನಿರ್ವಹಣೆ ಮಾಡಬೇಕು. ಅಭಿವೃದ್ಧಿ ಕಾರ್ಯಗಳನ್ನು ಚುರುಕುಗೊಳಿಸಬೇಕು. ಈ ನಿಟ್ಟಿನಲ್ಲಿ ಡಿಸಿಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು ಸ್ಥಳದಲ್ಲಿಯೇ ಸಮಸ್ಯೆ ಬಗೆಹರಿಸಲು ಕ್ರಮ ವಹಿಸಬೇಕು ಎಂದರು.
![ಗ್ರಾಮ ರಾಜ್ಯದ ಮೂಲಕ ರಾಮ ರಾಜ್ಯ ಸ್ಥಾಪಿಸುವುದು ನಮ್ಮ ಗುರಿ 2 WhatsApp Image 2021 01 20 at 11.28.53 1](https://kannada.thebengalurulive.com/wp-content/uploads/2021/01/WhatsApp-Image-2021-01-20-at-11.28.53-1.jpeg)
ಜಿಲ್ಲೆಯಲ್ಲಿ ನೀವೇ ಸರ್ಕಾರದ ಮುಖವಾಣಿ ಇದ್ದಂತೆ. ನೀವು ಆಸಕ್ತಿಯಿಂದ ಜನಪರ ಕಾಳಜಿ ವಹಿಸಿ. ಇದರಿಂದ ನಿಮಗೂ ಗೌರವ, ಸರ್ಕಾರಕ್ಕೂ ಗೌರವ. ಸರ್ಕಾರದ ಆಶಯ, ಕಾರ್ಯಕ್ರಮಗಳು, ತಳ ಹಂತದ ನಾಗರೀಕನಿಗೂ ತಲುಪಿಸುವ ಜವಬ್ದಾರಿ ನಿಮ್ಮದು. ಕೋವಿಡ್ ಬಳಿಕ ಈ ಸಮಯದಲ್ಲಿ ನಿಮ್ಮಿಂದ ಹೆಚ್ಚು ನಿರೀಕ್ಷೆ ಹೊಂದಲಾಗಿದೆ. ಅದಕ್ಕೆ ತಕ್ಕಂತೆ ಕಾರ್ಯನಿರ್ವಹಿಸಿ, ಸರ್ಕಾರಕ್ಕೆ ಒಳ್ಳೆ ಹೆಸರು ತನ್ನಿ. ಸರ್ಕಾರ ಸದಾ ನಿಮ್ಮ ಬೆಂಬಲಕ್ಕೆ ಇರುತ್ತದೆ ಎಂದು ಅಭಯ ನೀಡಿದರು.
ಕುಡಿಯುವ ನೀರು, ಜಮೀನು ಸಮಸ್ಯೆ, ಸ್ವಚ್ಚತೆ ಸೇರಿದಂತೆ ಮತ್ತಿತ್ತರ ಸಮಸ್ಯೆಗಳನ್ನು ಬಗೆಹರಿಸಬೇಕು. ಈ ಮೂಲಕ ಜನರು ನೆಮ್ಮದಿಯಿಂದ ಜೀವನ ನಡೆಸಲು ಕ್ರಮ ಕೈಗೊಳ್ಳಬೇಕು. ಶಾಲೆ ಆರಂಭ ವಾಗಿದೆ, ವಿದ್ಯಾರ್ಥಿಗಳು ಪೋಷಕರ ಸುರಕ್ಷತೆ ಬಗ್ಗೆ ಎಚ್ಚರ ವಹಿಸಬೇಕು. ಶಾಲೆಗಳ ಸ್ವಚ್ಚತೆ, ಕುಡಿಯುವ ನೀರು, ಶೌಚಾಲಯದ ಸಮಸ್ಯೆ ಉದ್ಭವವಾಗದಂತೆ ಕ್ರಮ ವಹಿಸಿ. ಎಸ್ಸಿ ಎಸ್ಟಿ ಓಬಿಸಿ ವಿದ್ಯಾರ್ಥಿಗಳ ನಿಲಯಗಳಲ್ಲಿ ಮಕ್ಕಳ ಆರೋಗ್ಯಕ್ಕೆ ಗಮನ ಹರಿಸಬೇಕು. ಉನ್ನತ ಮಟ್ಟದ ಶುಚಿಯಾದ ಆಹಾರ ಒದಗಿಸಸಬೇಕು. ಕೋವಿಡ್ ಸಂದರ್ಭದಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಪುನಃ ಶಾಲೆಗೆ ಸೇರಿಸಲು ಕ್ರಮ ವಹಿಸಿ. ಶಾಲೆ ನಡೆಯದ ಕಾರಣ ಬಾಲ್ಯ ವಿವಾಹ ಪ್ರಕರಣ ಹೆಚ್ಚಿವೆ ಈ ಕುರಿತು ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
![ಗ್ರಾಮ ರಾಜ್ಯದ ಮೂಲಕ ರಾಮ ರಾಜ್ಯ ಸ್ಥಾಪಿಸುವುದು ನಮ್ಮ ಗುರಿ 3 WhatsApp Image 2021 01 20 at 11.28.51](https://kannada.thebengalurulive.com/wp-content/uploads/2021/01/WhatsApp-Image-2021-01-20-at-11.28.51.jpeg)
ಕೋವಿಡ್ ಲಸಿಕೆ ಲೋಪದೋಷಗಳಿಗೆ ಆಸ್ಪದ ಕೊಡಬೇಡಿ: ಕೋವಿಡ್ ಲಸಿಕೆ ಅಭಿಯಾನ ಯಶಸ್ವಿ ಗೊಳಿಸುವ ಹೊಣೆಗಾರಿಕೆ ನಿಮ್ಮದು ಎಂದು ಸೂಚಿಸಿದರು. ಕೋವಿಡ್ ಲಸಿಕೆ ಲೋಪದೋಷ ಗಳಿಗೆ ಆಸ್ಪದ ಕೊಡಬೇಡಿ. ಇದರ ಬಗ್ಗೆ ಹೆಚ್ಚಿನ ಮುಂಜಾಗ್ರತಾ ವಹಿಸಲು ಕ್ರಮ ವಹಿಸಬೇಕು ಎಂದರು.
ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಪರಿಹಾರ ವಿತರಣೆಗೆ ಅನಗತ್ಯವಾಗಿ ವಿಳಂಬ ಆಗದ ರೀತಿ ಕ್ರಮ ವಹಿಸಿ. ಬೆಳೆ ಹಾನಿ ವಿವರಣೆಗಳನ್ನು ಪರಿಹಾರ ತಂತ್ರಾಂಶ ದಲ್ಲಿ ತ್ವರಿತವಾಗಿ ದಾಖಲಿಸಬೇಕು.
ಉಪಮುಖ್ಯಮಂತ್ರಿಗಳಾದ @GovindKarjol, @drashwathcn, ಸಚಿವರುಗಳಾದ @BSBommai, @VSOMANNA_BJP, @KotasBJP, @RAshokaBJP, @CCPatilBJP, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯಕಾರ್ಯದರ್ಶಿ @shalinirajnish, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. (2/2)
— CM of Karnataka (@CMofKarnataka) January 20, 2021
ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸಮ್ಮೇಳನದಲ್ಲಿ ಮುಖ್ಯಮಂತ್ರಿ @BSYBJP ರವರು ಅಧಿಕಾರಿಗಳಿಗೆ ನೀಡಿದ ಪ್ರಮುಖ ಸೂಚನೆಗಳು; pic.twitter.com/cjY79LxA1z
— CM of Karnataka (@CMofKarnataka) January 20, 2021
ಅಂತರ್ಜಲ ಮಟ್ಟ ಹೆಚ್ಚಿಸಲು ಆದ್ಯತೆ ಕೊಡಿ. ಬೇಸಿಗೆ ಕಾಲ ಶುರುವಾಗುತ್ತಿದೆ, ಹೀಗಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ. ನೀರಿನ ಸಮಸ್ಯೆ ಎದುರಿಸುತ್ತಿರುವ ಹಳ್ಳಿಗಳಿಗೆ ನೀರು ಪೂರೈಕೆ ಮಾಡಿ. ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಎಚ್ಚರಿಕೆ ವಹಿಸಿ. ಗೋಹತ್ಯೆ ನಿಷೇಧ ಕಾಯಿದೆಯ ಯನ್ಜು ಪರಿಣಾಮ ಕಾರಿಯಾಗಿ ಅನುಷ್ಠಾನಕ್ಕೆ ಕ್ರಮ ವಹಿಸಿ. ಭೂ ಸ್ವಾಧೀನ ಪ್ರಕರಣ ಇತ್ಯರ್ಥ ಪಡಿಸಲು ಕ್ರಮ ವಹಿಸಿ ಎಂದು ಸೂಚಿಸಿದರು.
ಜಿಲ್ಲೆಯ ಆಡಳಿತ ಯಂತ್ರ ಚುರುಕು ಆಗಬೇಕು. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು, ಕಾರ್ಯದರ್ಶಿಗಳು ಕ್ರಮ ವಹಿಸಬೇಕು. ಪ್ರತಿ ಜಿಲ್ಲೆ ಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಬೇಕು. ಈ ಮೂಲಕ ಆಡಳಿತ ಯಂತ್ರ ಚುರುಕು ಗೊಳಿಸಲು ಎಚ್ಚರಿಕೆ ವಹಿಸಬೇಕು ಎಂದರು.
ಅನುದಾನ ವೆಚ್ಚ ಕುರಿತು ಅವಲೋಕನ ತಂತ್ರಾಂಶ ಬಿಡುಗಡೆ
![ಗ್ರಾಮ ರಾಜ್ಯದ ಮೂಲಕ ರಾಮ ರಾಜ್ಯ ಸ್ಥಾಪಿಸುವುದು ನಮ್ಮ ಗುರಿ 4 WhatsApp Image 2021 01 20 at 11.28.53](https://kannada.thebengalurulive.com/wp-content/uploads/2021/01/WhatsApp-Image-2021-01-20-at-11.28.53.jpeg)
ಇದೇ ವೇಳೆ ಸಿಎಂ ಅನುದಾನ ವೆಚ್ಚ ಕುರಿತು ಅವಲೋಕನ ತಂತ್ರಾಂಶ ಬಿಡುಗಡೆ ಮಾಡಿದರು.
39 ಇಲಾಖೆಗಳ 1800 ಯೋಜನೆ ಗಳಿಗಾಗಿ ಅನುಷ್ಠಾನ ಅಧಿಕಾರಿಗಳಿಗಾಗಿ ಬಿಡುಗಡೆ ಮಾಡಲಾದ ಹಣ ಮತ್ತು ವೆಚ್ಚದ ವಿವರ ಹೊಂದಿರುವ ತಂತ್ರಾಂಶ ಇದಾಗಿದೆ. ಈ ಮೂಲಕ ಆಡಳಿತದಲ್ಲಿ ಹೆಚ್ಚು ಪಾರದರ್ಶಕತೆ ತರಲು ಸರ್ಕಾರ ಮುಂದಾಗಿದೆ.