Home ರಾಜಕೀಯ Parliament security breach; What had you done if Congress MPs have issued...

Parliament security breach; What had you done if Congress MPs have issued passes: DCM DK Shivakumar questions | ಸಂಸತ್ ಭದ್ರತಾ ಲೋಪ; ಕಾಂಗ್ರೆಸ್ ಸಂಸದರು ಪಾಸ್ ವಿತರಿಸಿದ್ದರೆ ನೀವು ಏನೆಲ್ಲಾ ಮಾಡುತ್ತಿದ್ದೀರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ

42
0
Parliament security breach; What had you done if Congress MPs have issued passes: DCM DK Shivakumar questions
Parliament security breach; What had you done if Congress MPs have issued passes: DCM DK Shivakumar questions

ಬೆಳಗಾವಿ:

“ಸಂಸತ್ತಿನಲ್ಲಿ ಭದ್ರತಾ ಲೋಪಕ್ಕೆ ಕಾರಣವಾಗಿರುವವರಿಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಪಾಸ್ ವಿತರಣೆ ಮಾಡಿದ್ದು, ಒಂದು ವೇಳೆ ಕಾಂಗ್ರೆಸ್ ಸಂಸದರು ಪಾಸ್ ವಿತರಣೆ ಮಾಡಿದ್ದರೆ ನೀವು ಏನೆಲ್ಲಾ ಮಾಡುತ್ತಿದ್ದೀರಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಬಿಜೆಪಿಯವರ ಮೇಲೆ ವಾಗ್ದಾಳಿ ನಡೆಸಿದರು.

ಸಂಸತ್ತಿನ ಲೋಕಸಭೆ ಕಲಾಪದ ವೇಳೆ ಆಗುಂತಕರು ಬುಧವಾರ ದಾಳಿ ಮಾಡಿ ಟಿಯರ್ ಗ್ಯಾಸ್ ಸ್ಫೋಟಿಸಿದ ವಿಚಾರವಾಗಿ ವಿಧಾನಸಭೆಯಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು: “ಈ ವಿಚಾರವಾಗಿ ನನಗೆ ಕರೆಗಳು ಬರುತ್ತಿವೆ. ಈಗ ಪ್ರತಾಪ್ ಸಿಂಹ ಅವರ ಹೆಸರು ತೆಗೆದುಕೊಳ್ಳಲು ನನಗೆ ಇಷ್ಟವಿಲ್ಲ. ಅವರು ಬಹಳ ಬುದ್ಧಿವಂತರು. ಪಾಸ್ ಗಳನ್ನು ನೀಡುವಾಗ ಪರಿಶೀಲನೆ ಮಾಡುವುದು ಸಹಜ. ಇಂತಹ ಪರಿಸ್ಥಿತಿಯಲ್ಲಿ ಸಂಸದರು ಅವರಿಗೆ ಯಾಕೆ ಪಾಸ್ ಕೊಟ್ಟರೋ ಗೊತ್ತಿಲ್ಲ. ನಾನು ಟಿವಿಯಲ್ಲಿ ನೋಡಿದಾಗ ವೀಕ್ಷಕರ ಗ್ಯಾಲರಿಯಿಂದಲೇ ಜಿಗಿದು ನುಗ್ಗಿದ್ದಾರೆ. ಸಂಸದರು ಬಚ್ಚಿಟ್ಟುಕೊಳ್ಳುವಂತಾಗಿದೆ. ವಿರೋಧ ಪಕ್ಷದ ನಾಯಕರು ಇದರ ಹೊಣೆಹೊತ್ತು ಅದೇನು ಬುದ್ಧಿವಾದ ಹೇಳುತ್ತಾರೋ ಹೇಳಲಿ” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಅಶೋಕ್ ಅವರು ಈ ವಿಚಾರದಲ್ಲಿ ರಾಜಕೀಯ ಮಾಡಲಾಗುತ್ತಿದೆ ಎಂದು ಹೇಳಿದರು.

ಅದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು “ಇದು ಸಂಸತ್ತಿನ ಭದ್ರತೆ ವಿಚಾರ. ಇದನ್ನು ನಾವು ಮಾಡಿದರೇನು, ನೀವು ಮಾಡಿದರೇನು? ಈ ವಿಚಾರದಲ್ಲಿ ನಿಮ್ಮ ನಿಲುವೇನು ಎಂದು ಕೇಳುತ್ತಿದ್ದೇವೆ. ನಿಮ್ಮ ನಿಲುವನ್ನು ನಿಮಗೆ ಬಿಟ್ಟಿದ್ದೇವೆ. ಈ ಘಟನೆ ಖಂಡಿಸುವ ನಿಲುವಳಿ ಸೂಚನೆಯನ್ನು ಪ್ರಸ್ತಾಪಿಸಬೇಕು. ಒಂದು ವೇಳೆ ನಾವು ಆ ಪಾಸನ್ನು ಕೊಟ್ಟಿದ್ದರೆ ನಮ್ಮ ವಿರುದ್ಧ ಏನೆಲ್ಲಾ ಟೀಕೆ ಮಾಡುತ್ತಿದ್ದಿರಿ?” ಎಂದು ಪ್ರಶ್ನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಸುರೇಶ್ ಕುಮಾರ್, ಈ ವಿಚಾರವಾಗಿ ಎಲ್ಲರೂ ಖಂಡನೆ ಮಾಡುತ್ತಿರುವಾಗ ಶಿವಕುಮಾರ್ ಅವರು ಪ್ರತಾಪ್ ಸಿಂಹ ಅವರ ವಿಚಾರ ಮಾತನಾಡಬಾರದಿತ್ತು ಎಂದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಶಿವಕುಮಾರ್ ಅವರು, “ಈ ವಿಚಾರವನ್ನು ಯಾಕೆ ಪ್ರಸ್ತಾಪಿಸಬಾರದು? ಸುಮ್ಮನೆ ಕೂರಬೇಕೆ? ಈ ಘಟನೆಯನ್ನು ನೀವು ನಿಜಕ್ಕೂ ಖಂಡಿಸುವುದೇ ಆದರೆ ಈ ಘಟನೆ ಬಗ್ಗೆ ಖಂಡನಾ ನಿಲುವಳಿಯನ್ನು ಹೊರಡಿಸಿ. ಒಂದು ವೇಳೆ ಕಾಂಗ್ರೆಸ್ ಸಂಸದರು ಆ ಪಾಸ್ ನೀಡಿದ್ದರೆ ಇಷ್ಟು ಹೊತ್ತಿಗೆ ಏನೆಲ್ಲಾ ಮಾಡುತ್ತಿದ್ದಿರಿ” ಎಂದು ವಾಗ್ದಾಳಿ ನಡೆಸಿದರು.

ನಂತರ ಗದ್ದಲ ಏರ್ಪಟ್ಟ ಹಿನ್ನೆಲೆಯಲ್ಲಿ ಸಭಾಧ್ಯಕ್ಷರು ಕಲಾಪವನ್ನು ಹತ್ತು ನಿಮಿಷಗಳ ಕಾಲ ಮುಂದೂಡಿದರು.

LEAVE A REPLY

Please enter your comment!
Please enter your name here