ಬೆಂಗಳೂರು, ಮಾರ್ಚ್ 17: ಕೆಂಪೇಗೌಡ ರಸ್ತೆಯ ಕಂದಾಯ ಭವನದ ಬಳಿಯ ಪಾದಚಾರಿ ಮೇಲ್ಸೇತುವೆ ದುರಸ್ಥಿ ಹಿನ್ನೆಲೆಯಲ್ಲಿ ಸಾರ್ವಜನಿಕ ಬಳಕೆಗೆ ನಿಷೇಧಿಸಲಾಗಿದೆ.
ಈ ಮೇಲ್ಸೇತುವೆ 2012ರಲ್ಲಿ ಖಾಸಗಿ ಸಂಸ್ಥೆ ಮೆಸರ್ಸ್ ರಾಜ್ಧೀಪ್ ಬಿಲ್ಡ್ ಕಾನ್ ಪ್ರೈವೇಟ್ ಲಿಮಿಟೆಡ್ ಅಡಿಯಲ್ಲಿ ನಿರ್ಮಿಸಲಾಗಿದೆ. ಪಾದಚಾರಿಗಳು ಮತ್ತು ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ, ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರು ಈ ಮೇಲ್ಸೇತುವೆಗೆ Close Down Order ನೀಡಿದ್ದು, ಮುಂದಿನ ಆದೇಶದವರೆಗೆ ಸಾರ್ವಜನಿಕ ಬಳಕೆ ನಿಷೇಧಿಸಲಾಗಿದೆ.
ಸಾರ್ವಜನಿಕರು ತಮ್ಮ ಸುರಕ್ಷತೆಯ ಹಿತದೃಷ್ಟಿಯಿಂದ ಈ ಮೇಲ್ಸೇತುವೆಯನ್ನು ಬಳಸಬಾರದು ಎಂದು ಮನವಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮೇಲ್ಸೇತುವೆ ದುರಸ್ತಿ ಮಾಡಿದ ನಂತರ, ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲು ಕ್ರಮ ವಹಿಸಲಾಗುವುದು.
