Home ಬೆಂಗಳೂರು ನಗರ ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್​ ಗೆ ಪಾದಚಾರಿ ಬಲಿ

ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್​ ಗೆ ಪಾದಚಾರಿ ಬಲಿ

54
0
Pedestrian victim of hit and run in Bangalore
Pedestrian victim of hit and run in Bangalore

ಬೆಂಗಳೂರು:

ರಾಜಾಜಿನಗರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ‌ ಭಾನುವಾರ ಹಿಟ್ ಆ್ಯಂಡ್ ರನ್​ ಗೆ ಪಾದಚಾರಿಯೊಬ್ಬರು ಬಲಿಯಾದ ದಾರುಣ ಘಟನೆ ನವರಂಗ್ ಸಿಗ್ನಲ್​ ಬಳಿ ಭಾನುವಾರ ನಡೆದಿದೆ.

ಪ್ರಕಾಶ್ ನಗರದ ನಿವಾಸಿಯಾಗಿರುವ ಕೃಷ್ಣಪ್ಪ (55) ಇಂದು ಬೆಳಗ್ಗೆ ರಾಜ್ ಕುಮಾರ್ ರಸ್ತೆ ಕಡೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ನವರಂಗ್ ಸಿಗ್ನಲ್‌ ಬಳಿ ಕಾರು ಚಾಲಕ ಯೂಟರ್ನ್ ತೆಗೆಯುವಾಗ ಕೃಷ್ಣಪ್ಪ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ಪರಿಣಾಮ ಕೃಷ್ಣಪ್ಪ ಸ್ಥಳದಲ್ಲೇ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ರಾಜಾಜಿನಗರ ಸಂಚಾರ ಪೊಲೀಸರು ಪರಾರಿಯಾಗಿದ್ದ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

LEAVE A REPLY

Please enter your comment!
Please enter your name here