ಬೆಂಗಳೂರು : ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಸಂಬಂಧ ಒಂದು ವಾರದೊಳಗೆ ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಹೇಳಿದ್ದು, ಇದು ನಾಡಿನ ರೈತರಿಗೆ ಸಿಗಬೇಕಿದ್ದ ನ್ಯಾಯಯುತ ಪರಿಹಾರವನ್ನು ಕೊಡಿಸುವ ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಹಂತದ ಜಯ ಎಂದು ಸಿಎಂ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದ್ದಾರೆ.
ಬರಪರಿಹಾರಕ್ಕಾಗಿ ಮನವಿ ನೀಡಿ ಐದು ತಿಂಗಳುಗಳು ಕಳೆದರೂ ಕೇಂದ್ರ @BJP4India ಸರ್ಕಾರವು ಯಾವುದೇ ನಿರ್ಣಯ ಕೈಗೊಳ್ಳದೆ, ನ್ಯಾಯಾಲಯದ ಮೆಟ್ಟಿಲೇರುವಂತಹ ಅನಿವಾರ್ಯತೆಯನ್ನು ಸೃಷ್ಟಿಸಿತ್ತು.
— Siddaramaiah (@siddaramaiah) April 22, 2024
ಇದು ನಾಡಿನ ರೈತರಿಗೆ ಸಿಗಬೇಕಿದ್ದ ನ್ಯಾಯಯುತ ಪರಿಹಾರವನ್ನು ಕೊಡಿಸುವ ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಹಂತದ ಜಯ. 2/2#DroughtReliefFund
ಈ ಕುರಿತು ಎಕ್ಸ್ ನಲ್ಲಿ ಬರೆದುಕೊಂಡಿರುವ ಅವರು, “ಬರ ಪರಿಹಾರ ಬಿಡುಗಡೆಗೆ ಚುನಾವಣಾ ಆಯೋಗ ಕೂಡ ಸಮ್ಮತಿಸಿದೆ ಎಂದು ಕೇಂದ್ರ ಸರ್ಕಾರದ ಅಟಾರ್ನಿ ಜನರಲ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಬರಪರಿಹಾರಕ್ಕಾಗಿ ಮನವಿ ನೀಡಿ ಐದು ತಿಂಗಳುಗಳು ಕಳೆದರೂ ಕೇಂದ್ರ ಸರ್ಕಾರವು ಯಾವುದೇ ನಿರ್ಣಯ ಕೈಗೊಳ್ಳದೆ, ನ್ಯಾಯಾಲಯದ ಮೆಟ್ಟಿಲೇರುವಂತಹ ಅನಿವಾರ್ಯತೆಯನ್ನು ಸೃಷ್ಟಿಸಿತ್ತು” ಎಂದು ಪೋಸ್ಟ್ ನಲ್ಲಿ ತಿಳಿಸಿದ್ದಾರೆ.