ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಈಶಾನ್ಯ ರಾಜ್ಯಗಳಾದ ಮೇಘಾಲಯ(Meghalaya)ಮತ್ತು ತ್ರಿಪುರಾ (Tripura) ಪ್ರವಾಸದ ಭಾಗವಾಗಿ ಶಿಲ್ಲಾಂಗ್ನಲ್ಲಿ ಈಶಾನ್ಯ ಕೌನ್ಸಿಲ್ನ (North Eastern Council)ಸುವರ್ಣ ಮಹೋತ್ಸವ ಆಚರಣೆಯಲ್ಲಿ ಭಾಗವಹಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಇತರರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಶಿಲ್ಲಾಂಗ್ನಲ್ಲಿ ನಡೆದ ಈಶಾನ್ಯ ಕೌನ್ಸಿಲ್ನ (NEC)ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.ಎನ್ಇಸಿ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಭಾಷಣ ಮಾಡಿದ ಪ್ರಧಾನಿ, ನಾವು ಎಲ್ಲಾ ಅಭಿವೃದ್ಧಿ ಯೋಜನೆಗಳಿಗೆ ವೇಗ ನೀಡಬೇಕು ಎಂದು ಹೇಳಿದ್ದಾರೆ. ಫುಟ್ಬಾಲ್ ಜ್ವರ ನಮ್ಮೆಲ್ಲರನ್ನೂ ಆವರಿಸುತ್ತಿರುವಾಗ, ಫುಟ್ಬಾಲ್ ಪರಿಭಾಷೆಯಲ್ಲಿ ಏಕೆ ಮಾತನಾಡಬಾರದು? ಯಾರಾದರೂ ಕ್ರೀಡಾ ಸ್ಪೂರ್ತಿಗೆ ವಿರುದ್ಧವಾಗಿ ಹೋದಾಗ, ಅವರಿಗೆ ಕೆಂಪು ಕಾರ್ಡ್ ತೋರಿಸಿ ಹೊರಗಟ್ಟಲಾಗುತ್ತದೆ. ಅದೇ ರೀತಿ, ಕಳೆದ 8 ವರ್ಷಗಳಲ್ಲಿ, ನಾವು ಈಶಾನ್ಯ ಅಭಿವೃದ್ಧಿಯಲ್ಲಿ ಹಲವಾರು ಅಡೆತಡೆಗಳಿಗೆ ರೆಡ್ ಕಾರ್ಡ್ ತೋರಿಸಿದ್ದೇವೆ ಎಂದು ಮೋದಿ ಹೇಳಿದ್ದಾರೆ.
(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)