Home ಬೆಂಗಳೂರು ನಗರ PM Vishwakarma Yojana in Bengaluru: ವಿಶ್ವಕರ್ಮ ಜನಾಂಗದವರು ಪ್ರೋತ್ಸಾಯಿಸಲು ಕೇಂದ್ರ ಸರ್ಕಾರದಿಂದ ರೂ. 13,000...

PM Vishwakarma Yojana in Bengaluru: ವಿಶ್ವಕರ್ಮ ಜನಾಂಗದವರು ಪ್ರೋತ್ಸಾಯಿಸಲು ಕೇಂದ್ರ ಸರ್ಕಾರದಿಂದ ರೂ. 13,000 ಕೋಟಿ ಧನಸಹಾಯ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

9
0
PM Vishwakarma Yojana in Bengaluru: central government has allocated Rs. 13,000 crore funding to encourage Vishwakarma people: Union Minister Shobha Karandlaje
PM Vishwakarma Yojana in Bengaluru: central government has allocated Rs. 13,000 crore funding to encourage Vishwakarma people: Union Minister Shobha Karandlaje
Advertisement
bengaluru

ಬೆಂಗಳೂರು:

ದೇಶದಾದ್ಯಂತ ವಿಶ್ವಕರ್ಮರು ಮಾಡುವ ಸಾಂಪ್ರದಾಯಿಕ ಕೆಲಸಗಳಿಗೆ ತಾಂತ್ರಿಕ ಬೆಂಬಲವನ್ನು ನೀಡುವುದು ಪ್ರಧಾನಿಯವರ ದೂರದೃಷ್ಟಿಯಾಗಿದ್ದು ವಿಶ್ವಕರ್ಮ ಜನಾಂಗದವರು ಯೋಜನೆಯ ಗರಿಷ್ಠ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಕೋರಿದರು.

ಅವರು ಇಂದು ನಗರದ ನಿಮಾನ್ಸ್ ಕನ್ವೆನ್ಷನ್ ಸೆಂಟರ್ ನಲ್ಲಿ ಕೇಂದ್ರ ಸರ್ಕಾರದ ವತಿಯಿಂದ ಪಿಎಂ ವಿಶ್ವಕರ್ಮ ಯೋಜನೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಯೋಜನೆಯು ಸಾಂಪ್ರದಾಯಿಕ ಕರಕುಶಲತೆಯಲ್ಲಿ ತೊಡಗಿರುವ ಜನರನ್ನು ಬೆಂಬಲಿಸುವ ಮತ್ತು ಕೌಶಲ್ಯಗೊಳಿಸುವ ಪ್ರಧಾನ ಮಂತ್ರಿಯವರ ಆಶಯದಿಂದ ಸ್ಫೂರ್ತಿ ಪಡೆದಿದೆ, ಪಿಎಂ ವಿಶ್ವಕರ್ಮ ಯೋಜನೆಗೆ ಕೇಂದ್ರ ಸರ್ಕಾರವು 13,000 ಕೋಟಿ ರೂಗಳ ಸಂಪೂರ್ಣ ಧನಸಹಾಯ ನೀಡಲಿದೆ ಎಂದರು.

ಕುಶಲಕರ್ಮಿಗಳನ್ನು ಆರ್ಥಿಕವಾಗಿ ಬೆಂಬಲಿಸುವುದು ಮಾತ್ರವಲ್ಲದೆ ಸ್ಥಳೀಯ ಉತ್ಪನ್ನಗಳು, ಕಲೆ ಮತ್ತು ಕರಕುಶಲ ವಸ್ತುಗಳ ಮೂಲಕ ಪ್ರಾಚೀನ ಸಂಪ್ರದಾಯ, ಸಂಸ್ಕೃತಿ ಮತ್ತು ವೈವಿಧ್ಯಮಯ ಪರಂಪರೆಯನ್ನು ಜೀವಂತವಾಗಿರಿಸುವ ಹಾಗೂ ಪ್ರವರ್ಧಮಾನಕ್ಕೆ ತರುವ ಬಯಕೆಯೊಂದಿಗೆ ಈ ಉಪಕ್ರಮ ಕೈಕೊಳ್ಳಲಾಗಿದೆ ಎಂದು ತಿಳಿಸಿದರು.

bengaluru bengaluru

ಪಿಎಂ ವಿಶ್ವಕರ್ಮ ಯೋಜನೆಯಡಿ, ಬಯೋಮೆಟ್ರಿಕ್ ಆಧಾರಿತ ಪಿಎಂ ವಿಶ್ವಕರ್ಮ ಪೋರ್ಟಲ್ ಬಳಸಿ ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ವಿಶ್ವಕರ್ಮರು ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. ಅವರಿಗೆ ʻಪಿಎಂ ವಿಶ್ವಕರ್ಮ ಪ್ರಮಾಣಪತ್ರʼ ಮತ್ತು ಗುರುತಿನ ಚೀಟಿ ನೀಡಲಾಗುವುದು. ಜೊತೆಗೆ, ಮೂಲ ಮತ್ತು ಸುಧಾರಿತ ತರಬೇತಿಯನ್ನು ಒಳಗೊಂಡ ಕೌಶಲ್ಯ ಉನ್ನತೀಕರಣ, 15,000 ರೂ.ಗಳ ಟೂಲ್ಕಿಟ್ ಪ್ರೋತ್ಸಾಹಧನ, ಮೊದಲ ಕಂತಿನಲ್ಲಿ 1 ಲಕ್ಷ ರೂ.ಗಳವರೆಗೆ ಮೇಲಾಧಾರ ರಹಿತ ಸಾಲ ಬೆಂಬಲ ಹಾಗೂ ಎರಡನೇ ಕಂತಿನಲ್ಲಿ 2 ಲಕ್ಷ ರೂ.ಗಳವರೆಗೆ 5% ರಿಯಾಯಿತಿ ಬಡ್ಡಿದರದಲ್ಲಿ ಸಾಲ, ಡಿಜಿಟಲ್ ವಹಿವಾಟುಗಳಿಗೆ ಪ್ರೋತ್ಸಾಹ ಮತ್ತು ಮಾರ್ಕೆಟಿಂಗ್ ಬೆಂಬಲವನ್ನು ನೀಡಲಾಗುವುದು ಎಂದರು.

ಕರ್ನಾಟಕದಲ್ಲಿ ಬೆಂಗಳೂರು ಹೊರತುಪಡಿಸಿ ಮಂಗಳೂರು ಮತ್ತು ಹುಬ್ಬಳ್ಳಿಯ ಇತರ ಎರಡು ಜಿಲ್ಲೆಗಳಲ್ಲಿ ಈ ಯೋಜನೆಯನ್ನು ವಾಸ್ತವಿಕವಾಗಿ ಪ್ರಾರಂಭಿಸಲಾಗಿದೆ.

ಕಾರ್ಯಕ್ರಮದಲ್ಲಿ ಸಂಸದರಾದ ಶ್ರೀ. ತೇಜಸ್ವಿ ಸೂರ್ಯ ಮತ್ತು ಶಾಸಕರಾದ ಶ್ರೀ.ಗೋಪಿನಾಥ ರೆಡ್ಡಿ, ಉದಯ ಗರುಡಚಾರ್ ಉಪಸ್ಥಿತರಿದ್ದರು.


bengaluru

LEAVE A REPLY

Please enter your comment!
Please enter your name here